AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ
ಸೇನಾಧಿಕಾರಿImage Credit source: NDTV
ನಯನಾ ರಾಜೀವ್
|

Updated on: Sep 12, 2023 | 10:45 AM

Share

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಕ್ಲೆಮೆಂಟ್ ಟೌನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ರಾಮೇಂದು ಉಪಾಧ್ಯಾಯ ಮಹಿಳೆ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದರು, ಆಕೆ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿದ್ದಾರೆ.ಪಂಡಿತ್ವಾರಿ ಪ್ರೇಮ್ ನಗರದಲ್ಲಿರುವ ಅವರ ಮನೆಯಿಂದ ಅವರನ್ನು ಬಂಧಿಸಲಾಗಿದೆ.

ಮೃತ ಶ್ರೇಯಾ ಶರ್ಮಾ ಸಿಲಿಗುರಿಯ ಡ್ಯಾನ್ಸ್​ ಬಾರ್​ನಲ್ಲಿ ಆರೋಪಿಯನ್ನು ಭೇಟಿಯಾಗಿದ್ದಳು, ಅವರ ಸಂಬಂಧ ಮೂರು ವರ್ಷಗಳ ಕಾಲ ಮುಂದುವರೆದಿತ್ತು. ಡೆಹ್ರಾಡೂನ್​ಗೆ ವರ್ಗಾವಣೆಯಾದಾಗ ಶ್ರೇಯಾಳನ್ನು ತನ್ನೊಂದಿಗೆ ಡೆಹ್ರಾಡೂನ್​ಗೆ ಕರೆದೊಯ್ದಿದ್ದ, ಬಾಡಿಗೆ ಮನೆಯಲ್ಲಿರಿಸಿದ್ದ ಎಂಬುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: ಧಾರವಾಡ: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಉಪಾಧ್ಯಾಯ ಶನಿವಾರ ರಾತ್ರಿ ರಾಜ್​ಪುರ ರಸ್ತೆಯ ಕ್ಲಬ್​ನಲ್ಲಿ ಮಹಿಳೆಯೊಂದಿಗೆ ಮದ್ಯ ಸೇವಿಸಿದ್ದರು. ಆಕೆಯನ್ನು ಲಾಂಗ್​ ಡ್ರೈವ್​ಗೆ ಕರೆದೊಯ್ಯಲು ಮುಂದಾಗಿದ್ದ, ಆಗ ನಗರದ ಹೊರವಲಯದಲ್ಲಿರುವ ನಿರ್ಜನ ಪ್ರದೇಶವಾದ ಥಾನೋ ರಸ್ತೆಗೆ ತಲುಪಿದಾಗ ಮಧ್ಯರಾತ್ರಿ 1.30 ಆಗಿತ್ತು. ಕಾರು ನಿಲ್ಲಿಸಿ ಮಹಿಳೆಯ ತಲೆಗೆ ಸುತ್ತಿಗೆಯಿಂದ ಪದೇ ಪದೇ ಹೊಡೆದು ಹತ್ಯೆ ಮಾಡಿದ್ದಾನೆ.

ಆಕೆಯನ್ನು ಕೊಂದು ಶವವನ್ನು ರಸ್ತೆಬದಿಯಲ್ಲಿ ಎಸೆದು ಓಡಿ ಹೋಗಿದ್ದಾನೆ. ಸೇನಾಧಿಕಾರಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಯನ್ನು ಮದುವೆಯಾಗುವಂತೆ ಮಹಿಳೆ ಒತ್ತಡ ಹೇರುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ