AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ

ಆರೋಪಿಗಳು ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ರೆಕಾರ್ಡ್ ಆಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಅಮ್ಮ ಮಹೇಶ್ವರಿ ದೇವಾಲಯದ ಮುಂದೆ ಸ್ನೇಹಿತರ ಜೊತೆ ರೋಹಿತ್ ಬರುತ್ತಿದ್ದ ವೇಳೆ ಈ ಅಟ್ಯಾಕ್ ಮಾಡಲಾಗಿತ್ತು.

ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 12, 2023 | 3:08 PM

Share

ಬೆಂಗಳೂರು, ಸೆ.12: ನಡುರಸ್ತೆಯಲ್ಲಿ ಮಾರಕಾಸ್ತ್ರ ಬೀಸಿದ್ದ ಆರೋಪಿಗಳನ್ನು ಕಾಮಾಕ್ಷಿಪಾಳ್ಯ (Kamakshipalya) ಸಬ್ ಪೊಲೀಸರು ಬಂಧಿಸಿದ್ದಾರೆ. ರಾಜು, ಧನುಷ್, ಗುರುಪ್ರಸಾದ್ ಸೇರಿ ಆರು ಆರೋಪಿಗಳ ಬಂಧನ. ಇವರು ಬಾರ್​ನಲ್ಲಿ ಅವಾಜ್ ಹಾಕಿದ್ದಕ್ಕೆ ಈ ಗ್ಯಾಂಗ್ ಮಚ್ಚು, ಲಾಂಗ್ ಬೀಸಿ ರೋಹಿತ್ ಗೌಡ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದರು. ಹೌದು, ಕಳೆದ ವಾರ ಗಾಯಾಳು ರೋಹಿತ್, ಆರೋಪಿಗಳಾದ ರಾಜು, ಧನುಷ್, ಗುರುಪ್ರಸಾದ್​ಗೆ ಅವಾಜ್ ಹಾಕಿದ್ದ. ಈ ಹಿನ್ನಲೆ ಸೆಪ್ಟೆಂಬರ್ 9 ರಂದು ಸಿನಿಮೀಯ ರೀತಿಯಲ್ಲಿ ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಅಟ್ಟಾಡಿಸಿದ್ದರು.

ಮರ್ಡರ್​ಗೆ ಸ್ಕೆಚ್ ಹಾಕಿದ್ದ ಆರೋಪಿಗಳು

ಗಾಯಾಳು ರೋಹಿತ್​ನನ್ನ ಹೀಗೆ ಬಿಟ್ಟರೇ ನಮ್ಮನ್ನೆ ಮುಗಿಸ್ತಾನೆಂದು ಮರ್ಡರ್​ಗೆ ಸ್ಕೆಚ್ ಹಾಕಿದ್ದ ಆರೋಪಿಗಳು, ಕಾಮಾಕ್ಷಿಪಾಳ್ಯ ರಸ್ತೆಯಲ್ಲೇ ಅಟ್ಯಾಕ್ ಮಾಡಿದ್ದರು. ಈ ವೇಳೆ ಗಾಯಾಳು ರೋಹಿತ್ ಬೆನ್ನು ಮೂಳೆ ಕಟ್ ಆಗುವಂತೆ ಲಾಂಗ್ ಬೀಸಿದ್ದರು. ಇದೀಗ ರೋಹಿತ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ:ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ಸಿಸಿ ಕ್ಯಾಮರಾ ಆಧರಿಸಿ ಆರೋಪಿಗಳ ಬಂಧನ

ಇನ್ನು ಆರೋಪಿಗಳು ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ರೆಕಾರ್ಡ್ ಆಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಅಮ್ಮ ಮಹೇಶ್ವರಿ ದೇವಾಲಯದ ಮುಂದೆ ಸ್ನೇಹಿತರ ಜೊತೆ ರೋಹಿತ್ ಬರುತ್ತಿದ್ದ ವೇಳೆ ಬೈಕ್​ನಲ್ಲಿ ಎದುರಿಗೆ ಬಂದ ರಾಜು, ಧನುಷ್, ಗುರುಪ್ರಸಾದ್ ದಾಳಿ ನಡೆಸಿದ್ದರು. ಏರಿಯಾ ಪೂರ್ತಿ ಲಾಂಗ್ ಬೀಸಿ ಮತ್ತೆ ಬಾರ್ ಸೇರಿದ್ದರು. ಈ ಕುರಿತು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕೇಸ್ ದಾಖಲಾಗಿತ್ತು. ಇದೀಗ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು