AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ

ಆರೋಪಿಗಳು ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ರೆಕಾರ್ಡ್ ಆಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಅಮ್ಮ ಮಹೇಶ್ವರಿ ದೇವಾಲಯದ ಮುಂದೆ ಸ್ನೇಹಿತರ ಜೊತೆ ರೋಹಿತ್ ಬರುತ್ತಿದ್ದ ವೇಳೆ ಈ ಅಟ್ಯಾಕ್ ಮಾಡಲಾಗಿತ್ತು.

ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
Jagadisha B
| Edited By: |

Updated on: Sep 12, 2023 | 3:08 PM

Share

ಬೆಂಗಳೂರು, ಸೆ.12: ನಡುರಸ್ತೆಯಲ್ಲಿ ಮಾರಕಾಸ್ತ್ರ ಬೀಸಿದ್ದ ಆರೋಪಿಗಳನ್ನು ಕಾಮಾಕ್ಷಿಪಾಳ್ಯ (Kamakshipalya) ಸಬ್ ಪೊಲೀಸರು ಬಂಧಿಸಿದ್ದಾರೆ. ರಾಜು, ಧನುಷ್, ಗುರುಪ್ರಸಾದ್ ಸೇರಿ ಆರು ಆರೋಪಿಗಳ ಬಂಧನ. ಇವರು ಬಾರ್​ನಲ್ಲಿ ಅವಾಜ್ ಹಾಕಿದ್ದಕ್ಕೆ ಈ ಗ್ಯಾಂಗ್ ಮಚ್ಚು, ಲಾಂಗ್ ಬೀಸಿ ರೋಹಿತ್ ಗೌಡ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದರು. ಹೌದು, ಕಳೆದ ವಾರ ಗಾಯಾಳು ರೋಹಿತ್, ಆರೋಪಿಗಳಾದ ರಾಜು, ಧನುಷ್, ಗುರುಪ್ರಸಾದ್​ಗೆ ಅವಾಜ್ ಹಾಕಿದ್ದ. ಈ ಹಿನ್ನಲೆ ಸೆಪ್ಟೆಂಬರ್ 9 ರಂದು ಸಿನಿಮೀಯ ರೀತಿಯಲ್ಲಿ ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಅಟ್ಟಾಡಿಸಿದ್ದರು.

ಮರ್ಡರ್​ಗೆ ಸ್ಕೆಚ್ ಹಾಕಿದ್ದ ಆರೋಪಿಗಳು

ಗಾಯಾಳು ರೋಹಿತ್​ನನ್ನ ಹೀಗೆ ಬಿಟ್ಟರೇ ನಮ್ಮನ್ನೆ ಮುಗಿಸ್ತಾನೆಂದು ಮರ್ಡರ್​ಗೆ ಸ್ಕೆಚ್ ಹಾಕಿದ್ದ ಆರೋಪಿಗಳು, ಕಾಮಾಕ್ಷಿಪಾಳ್ಯ ರಸ್ತೆಯಲ್ಲೇ ಅಟ್ಯಾಕ್ ಮಾಡಿದ್ದರು. ಈ ವೇಳೆ ಗಾಯಾಳು ರೋಹಿತ್ ಬೆನ್ನು ಮೂಳೆ ಕಟ್ ಆಗುವಂತೆ ಲಾಂಗ್ ಬೀಸಿದ್ದರು. ಇದೀಗ ರೋಹಿತ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ:ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ಸಿಸಿ ಕ್ಯಾಮರಾ ಆಧರಿಸಿ ಆರೋಪಿಗಳ ಬಂಧನ

ಇನ್ನು ಆರೋಪಿಗಳು ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ರೆಕಾರ್ಡ್ ಆಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಅಮ್ಮ ಮಹೇಶ್ವರಿ ದೇವಾಲಯದ ಮುಂದೆ ಸ್ನೇಹಿತರ ಜೊತೆ ರೋಹಿತ್ ಬರುತ್ತಿದ್ದ ವೇಳೆ ಬೈಕ್​ನಲ್ಲಿ ಎದುರಿಗೆ ಬಂದ ರಾಜು, ಧನುಷ್, ಗುರುಪ್ರಸಾದ್ ದಾಳಿ ನಡೆಸಿದ್ದರು. ಏರಿಯಾ ಪೂರ್ತಿ ಲಾಂಗ್ ಬೀಸಿ ಮತ್ತೆ ಬಾರ್ ಸೇರಿದ್ದರು. ಈ ಕುರಿತು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕೇಸ್ ದಾಖಲಾಗಿತ್ತು. ಇದೀಗ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?