AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲು ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ಅಂತರರಾಜ್ಯ ಕಳ್ಳರ ಬಂಧನ

ಬಿಹಾರದಿಂದ ಕಂಟ್ರಿ ಮೇಡ್ ಪಿಸ್ತೂಲ್ ತರಿಸಿ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ದೊಂಬರಹಳ್ಳಿಯಲ್ಲಿನ ಪದಮ್ ಚಿನ್ನದ ಅಂಗಡಿಯನ್ನು ದರೋಡೆ ಮಾಡಿದ್ದ ಏಳು ಜನ ಆರೋಪಿಗಳನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಿಸ್ತೂಲು ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ಅಂತರರಾಜ್ಯ ಕಳ್ಳರ ಬಂಧನ
ಮಾದಯಾಕನಹಳ್ಳಿ ಪೊಲೀಸ್​ ಠಾಣೆ, ಬಂಧಿತ ಆರೋಪಿಗಳು
ಬಿ ಮೂರ್ತಿ, ನೆಲಮಂಗಲ
| Edited By: |

Updated on:Aug 02, 2024 | 3:07 PM

Share

ನೆಲಮಂಗಲ, ಆಗಸ್ಟ್​ 02: ಸಿನಿಮಾ ಶೈಲಿಯಲ್ಲಿ ಪಿಸ್ತೂಲು ತೋರಿಸಿ ಚಿನ್ನದ ಅಂಗಡಿ (Gold Shop) ದರೋಡೆ (Robbery) ಮಾಡಿದ್ದ ಅಂತರರಾಜ್ಯ ಖದೀಮರನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾರಾಯಣ ಲಾಲ್ (43) ರಾಮ್ ಲಾಲ್ (54) ಕಿಶೋರ್ ಪವರ್ (25)ಮಹೇಂದ್ರ ಗೆಲೋಟ್ (25) ಕೀರ್ತಾರಾಮ್ (42) ಅಶೋಕ್ ಕುಮಾರ್ (39) ಸೋಹನ್ ರಾಮ್ (32) ಬಂಧಿತ ಆರೋಪಿಗಳು. ಆರೋಪಿಗಳಿಂದ 35 ಲಕ್ಷ ರೂ. ಮೌಲ್ಯದ 417 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ಒಂದು ಪಿಸ್ತೂಲ್, ಒಂದು ಡ್ಯ್ರಾಗರ್, ಆಟೋ ರಿಕ್ಷಾ ಮತ್ತು ಒಂದು ಕೆಟಿಎಂ ಡ್ಯೂಕ್ ಬೈಕ್ ಜಪ್ತಿ ಮಾಡಲಾಗಿದೆ.

ಆರೋಪಿಗಳು ಇದೇ ವರ್ಷ ಜೂನ್ 26 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ದೊಂಬರಹಳ್ಳಿಯಲ್ಲಿನ ರಾಜು ಪದಮ್ ಎಂಬುವರಿಗೆ ಸೇರಿದ ಪದಮ್ ಚಿನ್ನದ ಅಂಗಡಿಗೆ ನುಗ್ಗಿದ್ದರು. ಅಲ್ಲಿನ ಸಿಬ್ಬಂದಿಗೆ ಪಿಸ್ತೂಲು ತೋರಿಸಿ ಪರಾರಿಯಾಗಿದ್ದರು. ಮಾದನಾಯಕನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನೆಲಮಂಗಲ ಡಿವೈಎಸ್ಪಿ ಜಗದೀಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುರಳೀಧರ್ ಅವರ ನೇತೃತ್ವದಲ್ಲಿ ತಂಡ ತನಿಖೆಗೆ ಇಳಿಯುತ್ತದೆ. ಪೊಲೀಸ್​ ತಂಡವು ಸಿಸಿಟಿವಿ ದೃಷ್ಯಾವಳಿಗಳು ಮತ್ತು ತಾಂತ್ರಿಕ ಆಯಾಮದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಪಡೆದಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಬೆಂಗಳೂರಿನಲ್ಲಿ ಚಿನ್ನದ ಅಂಗಡಿ ಮತ್ತು ಬಟ್ಟೆ ಹಾಗೂ ಕೆಮಿಕಲ್ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಮತ್ತು ಬೊರುಂಡಾ, ಜೋದ್‌ಪುರ್ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳು ದರೋಡೆ ಮಾಡಿದ್ದ ಚಿನ್ನಾಭರಣಗಳನ್ನು ಬೆಂಗಳೂರು ಮತ್ತು ರಾಜಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದರು.

ಬೆಂಗಳೂರು ನಗರದ ಹೊರವಲಯಗಳಲ್ಲಿ ದರೋಡೆ ಮಾಡಿದರೆ ಸಿಕ್ಕಿ ಹಾಕಿಕೊಳ್ಳುವುದಿಲ್ಲವೆಂದು ಯೋಜಿಸಿ ಅರೋಪಿಗಳು ಕೃತ್ಯವೆಸಗಿದ್ದಾರೆ. ದರೋಡೆಗೆಂದು ಕಂಟ್ರಿ ಮೇಡ್ ಪಿಸ್ತೂಲ್ ಅನ್ನು ಬಿಹಾರ ಮೂಲದ ಅಶೋಕನಿಂದ ರಾಜಸ್ಥಾನಕ್ಕೆ ತರಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:44 pm, Fri, 2 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ