AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಶಾಸಕನ ಆಪ್ತ ಹತ್ಯೆ: ಸುಪಾರಿ ಕೊಲೆ ಶಂಕೆ.. ಮಾಸ್ಟರ್ ಮೈಂಡ್ ಯಾರು..?

ಬೆಂಗಳೂರಿನಲ್ಲಿ ಮೂರು ದಿನದ ಹಿಂದೆ ನಡೆದ ರೌಡಿಶೀಟರ್ ಹೈದರ್ ಅಲಿ ಹತ್ಯೆ ಕೇಸ್ ಆರೋಪಿಗಳ ಇನ್ನೂ ಪತ್ತೆಯಾಗಿಲ್ಲ.ಅಶೋಕ್​ ನಗರ ಪೊಲೀಸರು ಕೆಲವು ಅನುಮಾನಿತ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಕೊಲೆಗಾರರ ಬೆನ್ನಿಬಿದ್ದಿದ್ದಾರೆ‌. ಆದರೆ ಹೈದರ್ ಕೊಲೆ ಹಳೇ ದ್ವೇಷಕ್ಕೆ ನಡೆದಿರೋ ದಟ್ಟ ಅನುಮಾನ ಮೂಡಿದ್ದು, ಕೊಲೆ ಮಾಸ್ಟರ್ ಮೈಂಡ್ ಯಾರು..?

ಕಾಂಗ್ರೆಸ್‌ ಶಾಸಕನ ಆಪ್ತ ಹತ್ಯೆ: ಸುಪಾರಿ ಕೊಲೆ ಶಂಕೆ.. ಮಾಸ್ಟರ್ ಮೈಂಡ್ ಯಾರು..?
Hyder Ali
TV9 Web
| Edited By: |

Updated on: Feb 25, 2025 | 3:51 PM

Share

ಬೆಂಗಳೂರು, ಫೆಬ್ರವರಿ 25): ಬೆಂಗಳೂರನ್ನೇ ಬೆಚ್ಚಿಬೀಳಿಸಿರುವ ರೌಡಿ ಶೀಟರ್ ಹೈದರ್ ಅಲಿ ಹತ್ಯೆ ನಡೆದು ಮೂರು ದಿನವೇ ಕಳೆದೊಯ್ತು. ಆದರೆ ನಡುರಸ್ತೆಯಲ್ಲಿ ಹೈದರ್ ಅಲಿಯನ್ನ ಭೀಕರವಾಗಿ‌ ಕೊಲೆಗೈದ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ.. ಅಶೋಕ್ ನಗರ ಪೊಲೀಸರು ಸದ್ಯ ಪ್ರಕರಣ ಸಂಬಂಧ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಕೊಲೆಗಾರರ ಬೆನ್ನು ಹತ್ತಿದ್ದಾರೆ.

ಶಾಂತಿನಗರ ಕಾಂಗ್ರೆಸ್ ಮುಖಂಡನ ಸಹೋದರ. ಮತ್ತು ಶಾಸಕ ಹ್ಯಾರಿಸ್ ಬಳಗದಲ್ಲಿ ಗುರುತಿಸಿಕೊಂಡಿದ್ದ ಹೈದರ್ ಅಲಿಯನ್ನ ಶನಿವಾರ ರಾತ್ರಿ ಭೀಕರವಾಗಿ ಹತ್ಯೆ ಮಾಡಲಾಯ್ತು. ಈ ಪ್ರಕರಣದ ತನಿಖೆ ನಡೆಸುತ್ತಿರೋ ಅಶೋಕ್‌ನಗರ ಪೊಲೀಸರು ನಾಲ್ವರು ಶಂಕಿತರನ್ನ ವಶಕ್ಕೆ ತೆಗೆದುಕೊಂಡಿದ್ರು. ವಶಕ್ಕೆ ಪಡೆದವರನ್ ತೀವ್ರ ವಿಚಾರಣೆ ನಡೆಸಿ ಕೆಲವು ಮಹತ್ವದ ಮಾಹಿತಿ ಸಂಗ್ರಹಿಸಲಾಗಿದೆ. ಈ ಮಾಹಿತಿ ಆಧಾರದ‌ ಮೇಲೆಯೇ ಪೊಲೀಸರು ಕೊಲೆಗಾರರ ಹುಡುಕಾಟ ಮುಂದುವರಿಸಿದ್ದಾರೆ‌.‌ ಇನ್ನೂ ಹೈದರ್ ಅಲಿ ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಸದ್ಯ ಪೊಲೀಸರು ಕೊಲೆ ಹಿಂದಿನ ಕಾರಣ ಏನು ಅನ್ನೋದನ್ನೂ ಪತ್ತೆ ಹಚ್ಚುತ್ತಿದ್ದಾರೆ. ಹಾಗೆ ಆರೋಪಿಗಳ ಜಾಡಿ ಹಿಡಿದು ಹೊರ ಜಿಲ್ಲೆಗಳಲ್ಲೂ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಹೈದರ್ ಅಲಿ ಕೊಲೆಗೆ ಸುಪಾರಿ ಕೊಡಲಾಗಿದೆ ಎನ್ನಲಾಗ್ತಿದ್ದು, ಕೊಲೆ ಹಿಂದಿನ ಮಾಸ್ಟರ್ ಮೈಂಡ್ ಯಾರು ಎನ್ನುವುದೇ ನಿಗೂಢವಾಗಿದೆ.

ಕೊನೆ ನಡೆದಿದ್ದು ಎಲ್ಲಿ?

ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ಬಾರ್‌ನಲ್ಲಿ ತಡರಾತ್ರಿವರೆಗೆ ಪಾರ್ಟಿ ಮಾಡಿದ್ದ ಹೈದರ್‌ ಅಲಿ, ಸ್ನೇಹಿತನ ಜತೆ ಕಾರಿನಲ್ಲಿಆನೆಪಾಳ್ಯದ ತನ್ನ ಮನೆಗೆ ಹೋಗುತ್ತಿದ್ದಾಗ ನಾಲ್ಕೈದು ದುಷ್ಕರ್ಮಿಗಳು ದಾಳಿ ಮಾಡಿದ್ದರು. ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿ ಬಂದು ಫುಟ್ಬಾಲ್‌ ಸ್ಟೇಡಿಯಂ ಬಳಿ ಅಡ್ಡಗಟ್ಟಿದ್ದರು. ಆಗ ಕಾರಿನಿಂದ ಕೆಳಗಿಳಿದು ತಪ್ಪಿಸಿಕೊಳ್ಳಲು ಮುಂದಾದ ಹೈದರ್‌ ಅಲಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಂದಿದ್ದರು. ಈ ವೇಳೆ ಹೈದರ್‌ ಅಲಿಯನ್ನು ರಕ್ಷಿಸಲು ಮುಂದಾದ ಆತನ ಸ್ನೇಹಿತನ ಮೇಲೂ ದುಷ್ಕರ್ಮಿಗಳು ಹಲ್ಲೆನಡೆಸಿದ್ದರು.

ವರದಿ: ಪ್ರದೀಪ್ ಚಿಕ್ಕಾಟಿ, Tv9, ಬೆಂಗಳೂರು

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ