AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಬಳಿಯ ಪಿಜ್ಜಾ ಶಾಪ್​ನಲ್ಲಿ ಪ್ರೇಮಿಸಲು ನಿರಾಕರಿಸಿದ ಯುವತಿ ಮೇಲೆ ಹಲ್ಲೆ; ಆರೋಪಿ ಮ್ಯಾನೇಜರ್ ಬಂಧನ

ಮ್ಯಾನೇಜರ್ ಪುರುಷೋತ್ತಮ್​ನನ್ನು ರಿಜೆಕ್ಟ್ ಮಾಡಿ ಮತ್ತೊಬ್ಬ ಯುವಕನನ್ನು ಯುವತಿ ಪ್ರೇಮಿಸಿದ್ದಳು. ಮತ್ತೊಬ್ಬನ ಜೊತೆ ಚಾಟ್ ಮಾಡುತ್ತೀಯಾ ಅಂತ ಯುವತಿಯ ಕಪಾಳಕ್ಕೆ ಗಂಭೀರವಾಗಿ ಪುರುಷೋತ್ತಮ್ ಹಲ್ಲೆ ಮಾಡಿದ್ದ ಎನ್ನಲಾಗಿದೆ.

ಬಸವನಗುಡಿ ಬಳಿಯ ಪಿಜ್ಜಾ ಶಾಪ್​ನಲ್ಲಿ ಪ್ರೇಮಿಸಲು ನಿರಾಕರಿಸಿದ ಯುವತಿ ಮೇಲೆ ಹಲ್ಲೆ; ಆರೋಪಿ ಮ್ಯಾನೇಜರ್ ಬಂಧನ
ಮಹಿಳಾ ಉದ್ಯೋಗಿ ಮೇಲೆ ಹಲ್ಲೆ
TV9 Web
| Updated By: guruganesh bhat|

Updated on:Aug 07, 2021 | 5:19 PM

Share

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ  ನಗರದ ಬಸವನಗುಡಿಯ ಪಿಜ್ಜಾ ಅಂಗಡಿಯೊಂದರಲ್ಲಿ ಯುವತಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಮೇಲೆ ಹಲ್ಲೆ ಮಾಡಿದ್ದ ಮ್ಯಾನೇಜರ್ ಪುರುಷೋತ್ತಮ್ ಬಂಧಿಸಲಾಗಿದೆ. ಯುವತಿಯನ್ನು ಲವ್ ಮಾಡುವಂತೆ ಪೀಡಿಸುತ್ತಿದ್ದ ಮ್ಯಾನೇಜರ್ ಪುರುಷೋತ್ತಮ್ ಪ್ರೇಮ ಕೋರಿಕೆಯನ್ನು ಯುವತಿ ನಿರಾಕರಿಸಿದ್ದಳು ಎನ್ನಲಾಗಿದೆ. ಆದರೂ ಮ್ಯಾನೇಜರ್ ಪುರುಷೋತ್ತಮ್ ಪದೇ ಪದೇ ಯುವತಿಗೆ ಇದೇ ರೀತಿ ಕೆಲಸದ ಸ್ಥಳದಲ್ಲಿ ಕಿರುಕುಳ ಕೊಡುತ್ತಿದ್ದ ಎನ್ನಲಾಗಿದೆ. ಬೇರೆ ಯುವಕರ  ಜತೆ ಮಾತಾಡಬಾರದು. ಯಾರ ಜೊತೆಯಲ್ಲಿಯೂ ವಾಟ್ಸ್ಆ್ಯಪ್ ಚಾಟ್ ಮಾಡಬಾರದು ಎಂದು ಯುವತಿಯ ಮೊಬೈಲ್ ಚೆಕ್ ಮಾಡುತ್ತಿದ್ದ ಎಂದು ಧಮ್ಕಿ ಹಾಕಿದ್ದ ಎಂಬ ಆರೋಪ ಕೇಳಿಬಂದಿದೆ.

ಮ್ಯಾನೇಜರ್ ಪುರುಷೋತ್ತಮ್​ನನ್ನು ರಿಜೆಕ್ಟ್ ಮಾಡಿ ಮತ್ತೊಬ್ಬ ಯುವಕನನ್ನು ಯುವತಿ ಪ್ರೇಮಿಸಿದ್ದಳು. ಮತ್ತೊಬ್ಬನ ಜೊತೆ ಚಾಟ್ ಮಾಡುತ್ತೀಯಾ ಅಂತ ಯುವತಿಯ ಕಪಾಳಕ್ಕೆ ಗಂಭೀರವಾಗಿ ಪುರುಷೋತ್ತಮ್ ಹಲ್ಲೆ ಮಾಡಿದ್ದ ಎನ್ನಲಾಗಿದೆ. ವರದಿ ಬಳಿಕ ಸ್ಥಳಕ್ಕೆ ಭೇಟಿ ನೀಡಿ, ಸುಮೋಟೋ ಕೇಸ್ ದಾಖಲಿಸಿದ್ದ ಬಸವನಗುಡಿ ಪೊಲೀಸರು ಐಪಿಸಿ 323 ಹಲ್ಲೆ, 354 ಲೈಂಗಿಕ ಕಿರುಕುಳ, 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಮ್ಯಾನೇಜರ್ ಪುರುಷೋತ್ತಮ್ನನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿಯ ಮೇಲೆ ಹಲ್ಲೆ ಮಾಡಿರೋ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮಕೃಷ್ಣ ಆಶ್ರಮ ರಸ್ತೆಯಲ್ಲಿರುವ (ramakrishna ashram circle) ಪಿಜ್ಜಾ ಅಂಗಡಿ ಬಳಿ ಈ ಕಹಿ ಘಟನೆ ನಡೆದಿದೆ. ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯದಲ್ಲಿ ಯುವತಿ ದೂರು ನೀಡುವುದರಿಂದ ಹಿಂಜರಿದಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: 

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ; ಬಸವನಗುಡಿ ರಸ್ತೆಯ ಅಂಗಡಿ ಬಳಿ ಘಟನೆ 

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

(Assault on a young woman who refused to fall in love at a pizza shop near Basavanagudi accused manager arrest)

Published On - 4:55 pm, Sat, 7 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ