ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ. ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. […]

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ
ಸಾಧು ಶ್ರೀನಾಥ್​

Updated on: Jan 16, 2020 | 12:26 PM

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ.

ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. ಈ ಹಿನ್ನೆಲೆ ಮುನಿರಾಜು ಹಾಗೂ ಸಹಚರರು ಸೇರಿ ಹಲ್ಲೆ ಮಾಡಿದ್ದಾರೆ. ಗಾಯಾಳು ಪಚ್ಚಪ್ಪ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಆರೋಪಿ ಮುನಿರಾಜುನನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us