AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚು, ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹಾಸನ ಎಸ್​ಪಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯ ಆರೋಗ್ಯ ವಿಚಾರಿಸಿದರು.

ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ
ಮಚ್ಚಿನಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪಿ ಪತಿ ಬಂಧನಕ್ಕೆ ಪೊಲೀಸರ ಶೋಧಕಾರ್ಯ
Rakesh Nayak Manchi
|

Updated on: Jun 25, 2023 | 4:55 PM

Share

ಹಾಸನ: ತನ್ನ ಪತ್ನಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ಸಂಬಂಧ ಆರೋಪಿ ಪತಿ ಬಂಧನಕ್ಕೆ ಶೋಧಕಾರ್ಯ ಮುಂದುವರಿದಿದೆ ಎಂದು ಹಾಸನ ಜಿಲ್ಲಾ ಎಸ್​ಪಿ (Hassan SP) ಹರಿರಾಮ್ ಶಂಕರ್ ಹೇಳಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯ ವಿಚಾರಿಸಿದ ನಂತರ ಆಸ್ಪತ್ರೆ ಬಳಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಆರೋಪಿಗೆ ಮಚ್ಚು ನೀಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.

ಶ್ರೀನಿವಾಸ ಮತ್ತು ಸವಿತಾ ಎಂಬವರು 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಸದ್ಯ ಪತಿಯಿಂದ ವಿಚ್ಛೇದನ ಪಡೆಯಲು ಸವಿತಾ ಕಾನೂನು ಹೋರಾಟ ನಡೆಸುತ್ತಿದ್ದು, 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅಲ್ಲದೆ, ಪತಿಯ ಆಸ್ತಿ ವಿಭಾಗಕ್ಕಾಗಿ ಸವಿತಾ ಕೇಸ್ ಮಾಡಿದ್ದಾಳೆ. ಆದರೆ ನಿನ್ನೆ (ಜೂನ್ 24) ನಿವೇಶನ ಮಾರಾಟದ ವಿಚಾರವಾಗಿ ಸವಿತಾಳ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದು, ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚು ಮತ್ತು ರಾಡ್​ನಿಂದ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸಾಫ್ಟ್​ವೇರ್​ ಇಂಜಿನಿಯರ್ ಕಿಡ್ನಾಪ್​: ಸುಪಾರಿ ನೀಡಿದ್ದ ಪ್ರಿಯತಮೆ ಅಂದರ್​, ಪ್ರಕರಣದ ರೋಚಕ ಕಹಾನಿ ಇಲ್ಲಿದೆ

ಕೈ ಹಾಗೂ ದೇಹದ ಹಲವೆಡೆ ಗಂಭೀರವಾಗಿ ಗಾಯಗೊಂಡ ಸವಿತಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವಕ್ಕೇನು ಅಪಾಯ ಇಲ್ಲ ಎಂದು ಎಸ್​ಪಿ ತಿಳಿಸಿದ್ದಾರೆ. ಪ್ರಕರಣ ಸಂಬಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀನಿವಾಸನನ್ನು ಬಂಧಿಸಲು ಮೂರು ತಂಡ ರಚಿಸಲಾಗಿದೆ. ಆದಷ್ಟು ಬೇಗ ಬಂಧಿಸುತ್ತೇವೆ. ಮಚ್ಚು ನೀಡಿದ್ದ ಆರೋಪಿಯ ಸಹೋದರನನ್ನು ಬಂಧಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ