AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರು ಸೌಂಡ್​ ಇಟ್ಟು ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದು ಬೆಂಗಳೂರಿನ ನಗರತ್​ಪೇಟೆಯಲ್ಲಿರುವ ಮೊಬೈಲ್​​ ಅಂಗಡಿಯಲ್ಲಿನ ಯುವಕ ಮೇಲೆ ಐವರು ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಜೋರು ಸೌಂಡ್​ ಇಟ್ಟು ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ
ಯುವಕನ ಮೇಲೆ ಹಲ್ಲೆ
Shivaprasad B
| Updated By: ವಿವೇಕ ಬಿರಾದಾರ|

Updated on: Mar 18, 2024 | 1:27 PM

Share

ಬೆಂಗಳೂರು, ಮಾರ್ಚ್​ 18: ಜೋರು ಸೌಂಡ್​ (Loud Sound) ಇಟ್ಟು ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ನಗರತ್​ಪೇಟೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು (Police) ಬಂಧಿಸಿದ್ದಾರೆ. ಸುಲೇಮಾನ್, ಶಹನವಾಜ್, ರೋಹಿತ್ ಬಂಧಿತ ಆರೋಪಿಗಳು.

ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹಿಂದಿ ಭಾಷೆಯ ಭಜನೆ ಹಾಡುಗಳನ್ನು ಜೋರು ಸೌಂಡ್​ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು “ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದಾರೆ.

ಗ್ಯಾಂಗ್​ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಗಾಯಗೊಂಡ ಮುಖೇಶ್​ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದಾರೆ. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ

ಕರ್ನಾಟಕ ತಾಲಿಬಾನ್ ಆಗಿ ಬದಲಾಗುತ್ತಿದೆ: ಬಿಜೆಪಿ

“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.”

“ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂದ ದುರುಳರು ಹಲ್ಲೆ ಮಾಡಲು ಕಾರಣ‌. ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.”

“ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ