AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಆಸ್ತಿ ಗಳಿಕೆ: ಕೊಡಗು, ಮೈಸೂರಿನಲ್ಲಿ ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯ ಮೀರಿ ಆಸ್ತಿ ಗಳಿಕೆ, ಲಂಚ ಆರೋಪ ಸಂಬಂಧ ಬೆಂಗಳೂರು, ಕೊಡಗು ಹಾಗೂ ಮೈಸೂರಿನಲ್ಲಿರುವ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಆದಾಯ ಮೀರಿ ಆಸ್ತಿ ಗಳಿಕೆ: ಕೊಡಗು, ಮೈಸೂರಿನಲ್ಲಿ ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಮೈಸೂರು ಮತ್ತು ಕೊಡಗಿನನಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
TV9 Web
| Edited By: Rakesh Nayak Manchi|

Updated on:Oct 21, 2022 | 2:42 PM

Share

ಮೈಸೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿಗಳಾದ ಕೃಷ್ಣಯ್ಯ ಮಾಲ್ತೀಶ್, ಪವನ್ ಕುಮಾರ್, ಎಸ್​ಟಿ ಒಡೆಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.  ಮೈಸೂರಿನ ಕೆ‌.ಸಿ.ಬಡಾವಣೆ ನಿವಾಸಿಯಾಗಿರುವ ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಇಲಾಖೆ ಇಇ ಡಿ.ನಾಗರಾಜು ಅವರಿಗೆ ಸೇರಿದ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಮನೆಯನ್ನು ಜಾಲಾಡಿದ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಇನ್ನು ನೀರಾವರಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ಆಗಿರುವ ರಫೀಕ್ ಅವರಿಗೆ ಕುಶಾಲನಗರದಲ್ಲಿರುವ​ ಮನೆಗೂ ಅಧಿಕಾರಿಗಳು ಎಂಟ್ರಿ ಕೊಟ್ಟು ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಮತ್ತೊಂದು ತಂಡ ಮಾದಾಪಟ್ಟಣದಲ್ಲಿರುವ ರಾಜ್ಯ ಗುಪ್ತವಾರ್ತೆ ಪೊಲೀಸ್ ಇನ್​ಸ್ಪೆಕ್ಟರ್ ಎಂ.ಮಹೇಶ್ ಅವರಿಗೆ ಸೇರಿದ ಮನೆಯ ಮೇಲೂ ದಾಳಿ ನಡೆಸಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ನಾಗರಾಜ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಿಳೇಕಹಳ್ಳಿಯ ಬೆಸ್ಕಾಂ ಇಲಾಖೆ ಎಇ ಆಗಿರುವ ನಾಗರಾಜ್, ಮಂಜೂರಾದ ಕೆಲಸಕ್ಕೆ ಎಕ್ಸಿಕ್ಯೂಟ್​ಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ ಆರ್​ಆರ್ ನಗರ ಮನೆ ಹತ್ತಿರ ಹಣ ಸಂಬಂಧಪಟ್ಟ ಗುತ್ತಿಗೆದಾರನ ಬಳಿಯಿಂದ 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದ ಅಧಿಕಾರಿಗಳು ನಾಗರಾಜ್​ನನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್​ಪಿ ಅಶೋಕ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Fri, 21 October 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?