AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ ಮಾಡ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಅರೆಸ್ಟ್

13 ಲಕ್ಷ ಸಾಲ ಮಾಡಿಕೊಂಡಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಅವರು ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನಕ್ಕೆ ಇಳಿದಿದ್ದರು. ಸದ್ಯ ಅರಸಿಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸ್ವರಾಜ್ ಅವರನ್ನು ಬಂಧಿಸಿದ್ದಾರೆ.

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ ಮಾಡ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಅರೆಸ್ಟ್
ಪಡಿ ಸ್ವರಾಜ್
Jagadisha B
| Edited By: |

Updated on: Jan 30, 2024 | 7:44 AM

Share

ಬೆಂಗಳೂರು, ಜ.30: ಸಾಲ ತೀರಿಸೋಕೆ ಪರದಾಡುತ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot)  ಸಾಲ ತೀರಿಸಲು ಕಳ್ಳತನದ (Theft) ದಾರಿ ಹಿಡಿದು ಜೈಲು ಸೇರಿದ್ದಾರೆ. ಅರಸಿಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಅವರನ್ನು ಬಂಧಿಸಿ 3 ಲಕ್ಷದ 33 ಸಾವಿರದ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಾಲ ತೀರಿಸೋಕೆ ಪಡಿ ಸ್ವರಾಜ್ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನಕ್ಕೆ ಇಳಿದಿದ್ದರು. ಒಂದು ವರ್ಷದ ಹಿಂದೆಯಷ್ಟೇ ತುಂಬುಬಡ ಕುಟುಂಬದ ಹುಡಗಿಯನ್ನ ಮದುವೆಯಾಗಿದ್ದ ಪಡಿ ಸ್ವರಾಜ್ ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದರು. ಮೈ ತುಂಬಾ ಇದ್ದ ಸಾಲ ತೀರಿಸಲಾಗದೇ ಒದ್ದಾಡುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಮಲಗಿದ್ದಾಗ ಅವರ ಲ್ಯಾಪ್ ಟಾಪ್ ಬಾಗ್ ಕಳ್ಳತನವಾಗಿತ್ತು. ಈ ಪ್ರಕರಣದ ತನಿಖೆ ಕೈ ಗೊಂಡಾ ಗಪಡಿ ಸ್ವರಾಜ್ ಕೈ ಚಳಕ ಬಯಲಾಗಿದೆ.

ಅನುಮಾನ ಬಂದು ಪೊಲೀಸರು, ಪಡಿ ಸ್ವರಾಜ್ ಟ್ರಾಲಿ ಬ್ಯಾಗ್ ಪರಿಶೀಲಿಸಿದ್ದು ಅತನ ಬ್ಯಾಗ್​ನಲ್ಲಿ ಮೊಬೈಲ್ ಫೋನ್​ಗಳು, ಆಭರಣ ಪತ್ತೆಯಾಗಿದೆ. ಅದರ ಬಗ್ಗೆ ಕೇಳಿದಾಗ ಮೊದಲಿಗೆ ತನ್ನ ಹೆಂಡತಿಯ ಆಭರಣ ಎಂದು ಸ್ವರಾಜ್ ಕಥೆ ಕಟ್ಟಿದ್ದ. ಅನಂತರ ಪೊಲೀಸರ ವಿಚಾರಣೆಯಲ್ಲಿ ಕಳ್ಳತನ ಮಾಡುತ್ತಿರೋದಾಗಿ ತಪ್ಪೊಪ್ಪಿಕೊಂಡರು. ಆರೋಪಿಯ ವಿಚಾರಣೆಯಿಂದ ಒಟ್ಟು 5 ಪ್ರಕರಣಗಳು ಬೆಳಕಿಗೆ ಬಂದಿದೆ. ಒಟ್ಟು 3 ಲಕ್ಷದ 33 ಸಾವಿರ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನೆಲಮಂಗಲ: ಗುರಾಯಿಸಿ ನಿಂದಿಸಿದ ಯುವಕನಿಗೆ ಚಾಕು ಇರಿತ

ಬೈಕ್ ಚಕ್ರಕ್ಕೆ ಟಾರ್ಪಲ್ ಸಿಲುಕಿ ಸವಾರ ಸಾವು

ರಸ್ತೆಯಲ್ಲಿ ರೈತರು ಹುರುಳಿ ಹುಲ್ಲನ್ನು ಒಕ್ಕಣೆ ಮಾಡುತ್ತಿದ್ದರು. ಹುರುಳಿ ಹುಲ್ಲಿನ ಗುಡ್ಡೆಗೆ ಹಾಕಿದ್ದ ಟಾರ್ಪಲ್ ಬೈಕ್ ಚಕ್ರಕ್ಕೆ ಸಿಲುಕಿ ಸವಾರ ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಅರಕಲವಾಡಿ ಸಮೀಪ ಘಟನೆ ನಡೆದಿದ್ದು, ಬೈಕ್ ಹಿಂಬದಿ ಸವಾರ ಮಹಾದೇವಯ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನೂ ಸವಾರ ಉದಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು.

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಬಣವೆ ಭಸ್ಮ

ಆಕಸ್ಮಿಕ ಬೆಂಕಿಯಿಂದ ಮೆಕ್ಕೆಜೋಳ, ಶೇಂಗಾ ಬಣವೆಗಳು ಸುಟ್ಟು ಕರಕಲಾಗಿವೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲ ಬೊಮ್ಮನಹಳ್ಳಿಯಲ್ಲಿ ಅವಘಡ ನಡೆದಿದೆ. ರೈತ ರಾಘವೇಂದ್ರಗೆ ಸೇರಿದ ಮೆಕ್ಕೆಜೋಳದ ಹೊಟ್ಟು, ಶೇಂಗಾ ಹೊಟ್ಟು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?