AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ

ಇನ್ನೂ ಮೀಸೆ ಚಿಗುರಿದ ಯುವಕ ಓರ್ವ, ಸಿನಿಮಾ ನೋಡಿ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್​ ಮಾಡಿ, 5 ಲಕ್ಷ ರೂ. ಡಿಮ್ಯಾಂಡ್​ ಮಾಡಿರುವಂತಹ ಘಟನೆ ಘಟನೆ ಆಗಸ್ಟ್​ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಕಿಡ್ನಾಪ್​ ಪ್ರಕರಣವನ್ನು ಹೆಚ್​ಎಸ್​ ಆರ್​ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.

ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: |

Updated on:Aug 09, 2023 | 4:28 PM

Share

ಬೆಂಗಳೂರು, ಆಗಸ್ಟ್​ 09: ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ (Astrologer) ಪುತ್ರನನ್ನು ಓರ್ವ ಯುವಕ ಕಿಡ್ನಾಪ್ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವಂತಹ ಘಟನೆ ಆಗಸ್ಟ್​ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿಷಿ ಮಣಿವಾಸಕನ್​ ಎಂಬವವರ 18 ವರ್ಷದ ಪುತ್ರನನ್ನು ಕಿಡ್ನಾಪ್​ ಮಾಡಲಾಗಿತ್ತು. ಸದ್ಯ ಕಿಡ್ನಾಪ್​ ಪ್ರಕರಣವನ್ನು ಹೆಚ್​ಎಸ್​ ಆರ್​ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.

ಗ್ಯಾರೇಜ್​ನಲ್ಲಿ ಕೆಲಸ

ಬಂಧಿತ ಯುವಕ ಅರ್ಜುನ್​​ ಮೂಲತಃ ತುಮಾಕೂರಿನವನು. ಪಿಯುಸಿ ಮುಗಿಸಿ ಬೆಂಗಳೂರಿಗೆ ಬಂದು ಪಿಜಿಯಲ್ಲಿ ವಾಸಿಸುತ್ತಿದ್ದ. ಸಾಧನೆ ಮಾಡಬೇಕೆಂದು ಅಂದುಕೊಂಡಿದ್ದವನು ಆದರೆ ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ ಸಿನಿಮಾ ನೋಡುತಿದ್ದ ಅರ್ಜುನ್​ನಿಂದ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್​ ಮಾಡುವ ಖತರ್ನಾಕ ಯೋಚನೆ ಬಂದಿದೆ.

ಇದನ್ನೂ ಓದಿ: ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಡಮ್ಮಿ ಗನ್​ ಬಳಕೆ

ಜ್ಯೋತಿಷಿ ಮಗ ಮೆಡಿಕಲ್ ಸೀಟ್​ಗಾಗಿ ಕೋಚಿಂಗ್​ಗೆ ತೆರಳುತ್ತಿದ್ದ. ತಮ್ಮದೇ ಕಾರ್​ನಲ್ಲಿ ಕೋಚಿಂಗ್ ತೆರಳುತ್ತಿದ್ದು, ಡ್ರಾಪ್ ಕೇಳುವ ನೆಪದಲ್ಲಿ, ಗನ್ ಹಣೆಗಿಟ್ಟು ಗಾಡಿ ಹೇಳಿದ ಕಡೆ ಹೊಗುವಂತೆ ಸೂಚಿಸಿ ಕಿಡ್ನಾಪ್​ ಮಾಡಲಾಗಿದೆ. ಬಳಿಕ ಜ್ಯೋತಿಷಿ ಹಾಗೂ ಅವರ ಪತ್ನಿಗೆ ವಾಟ್ಸ್​​ ಆ್ಯಪ್ ವಿಡಿಯೋ ಕಾಲ್​ ಮಾಡಿ,​ 5 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾನೆ.

ಇದನ್ನೂ ಓದಿ: ಪೊಲೀಸ್ ಇನ್ಸ್​​ಪೆಕ್ಟರ್ ನೇತೃತ್ವದಲ್ಲಿ ಕಳ್ಳ ಪೊಲೀಸ್ ಆಟವಂತೆ: ಹಣ ಬದಲಾವಣೆ-ಅಕ್ರಮ ಬಂಧನ-ಸಿಬ್ಬಂದಿಗೆ ಕಿರುಕುಳ ಆರೋಪ -TV9 Digitalನಲ್ಲಿ ಪ್ರಕರಣ ಬಟಾಬಯಲು

ಬಳಿಕ ಚಿನ್ನ ನೀಡುವುದಾಗಿ ಹೇಳಿ ಜ್ಯೋತಿಷಿ ಪತ್ನಿ ಮನೆಯಿಂದ ಹೊರಟಿದ್ದಾರೆ. ಮತ್ತೊಂದೆಡೆ ಮಗ ಕಿಡ್ನಾಪ್ ಆದ ಬಗ್ಗೆ ಜ್ಯೋತಿಷಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗಾಗಿ ಕಾರ್ಯಾಚರಣೆಗಿಳಿದ ಪೊಲೀಸರಿಂದ ಆರೋಪಿಯನ್ನು ಅರೆಸ್ಟ್​ ಮಾಡಿದ್ದು, ಬಳಿಕ ಆತ ಹೆದರಿಸಲು ಬಳಸಿದ ಗನ್​ ಡಮ್ಮಿ ಎನ್ನುವುದು ಪತ್ತೆ ಆಗಿದೆ.

ಸಿನಿಮಾಗಳಲ್ಲಿ ಬಳಸುವ ಮಾದರಿಯ ಗನ್ ಆರ್ಡರ್ ಕೊಟ್ಟು ಮಾಡಿಸಿಕೊಂಡಿದ್ದ. 38 ಸಾವಿರ ರೂ. ಕೊಟ್ಟು ಡಮ್ಮಿ ಗನ್ ಖರೀದಿ ಮಾಡಿದ್ದ. ಬಳಿಕ ಜ್ಯೋತಿಷಿ ನಿವಾಸದ ಬಳಿ ಒಂದು ತಿಂಗಳ ವಾಚ್​ ಮಾಡಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Wed, 9 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ