AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ

ಇನ್ನೂ ಮೀಸೆ ಚಿಗುರಿದ ಯುವಕ ಓರ್ವ, ಸಿನಿಮಾ ನೋಡಿ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್​ ಮಾಡಿ, 5 ಲಕ್ಷ ರೂ. ಡಿಮ್ಯಾಂಡ್​ ಮಾಡಿರುವಂತಹ ಘಟನೆ ಘಟನೆ ಆಗಸ್ಟ್​ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಕಿಡ್ನಾಪ್​ ಪ್ರಕರಣವನ್ನು ಹೆಚ್​ಎಸ್​ ಆರ್​ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.

ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Aug 09, 2023 | 4:28 PM

Share

ಬೆಂಗಳೂರು, ಆಗಸ್ಟ್​ 09: ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ (Astrologer) ಪುತ್ರನನ್ನು ಓರ್ವ ಯುವಕ ಕಿಡ್ನಾಪ್ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವಂತಹ ಘಟನೆ ಆಗಸ್ಟ್​ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿಷಿ ಮಣಿವಾಸಕನ್​ ಎಂಬವವರ 18 ವರ್ಷದ ಪುತ್ರನನ್ನು ಕಿಡ್ನಾಪ್​ ಮಾಡಲಾಗಿತ್ತು. ಸದ್ಯ ಕಿಡ್ನಾಪ್​ ಪ್ರಕರಣವನ್ನು ಹೆಚ್​ಎಸ್​ ಆರ್​ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.

ಗ್ಯಾರೇಜ್​ನಲ್ಲಿ ಕೆಲಸ

ಬಂಧಿತ ಯುವಕ ಅರ್ಜುನ್​​ ಮೂಲತಃ ತುಮಾಕೂರಿನವನು. ಪಿಯುಸಿ ಮುಗಿಸಿ ಬೆಂಗಳೂರಿಗೆ ಬಂದು ಪಿಜಿಯಲ್ಲಿ ವಾಸಿಸುತ್ತಿದ್ದ. ಸಾಧನೆ ಮಾಡಬೇಕೆಂದು ಅಂದುಕೊಂಡಿದ್ದವನು ಆದರೆ ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ ಸಿನಿಮಾ ನೋಡುತಿದ್ದ ಅರ್ಜುನ್​ನಿಂದ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್​ ಮಾಡುವ ಖತರ್ನಾಕ ಯೋಚನೆ ಬಂದಿದೆ.

ಇದನ್ನೂ ಓದಿ: ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಡಮ್ಮಿ ಗನ್​ ಬಳಕೆ

ಜ್ಯೋತಿಷಿ ಮಗ ಮೆಡಿಕಲ್ ಸೀಟ್​ಗಾಗಿ ಕೋಚಿಂಗ್​ಗೆ ತೆರಳುತ್ತಿದ್ದ. ತಮ್ಮದೇ ಕಾರ್​ನಲ್ಲಿ ಕೋಚಿಂಗ್ ತೆರಳುತ್ತಿದ್ದು, ಡ್ರಾಪ್ ಕೇಳುವ ನೆಪದಲ್ಲಿ, ಗನ್ ಹಣೆಗಿಟ್ಟು ಗಾಡಿ ಹೇಳಿದ ಕಡೆ ಹೊಗುವಂತೆ ಸೂಚಿಸಿ ಕಿಡ್ನಾಪ್​ ಮಾಡಲಾಗಿದೆ. ಬಳಿಕ ಜ್ಯೋತಿಷಿ ಹಾಗೂ ಅವರ ಪತ್ನಿಗೆ ವಾಟ್ಸ್​​ ಆ್ಯಪ್ ವಿಡಿಯೋ ಕಾಲ್​ ಮಾಡಿ,​ 5 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾನೆ.

ಇದನ್ನೂ ಓದಿ: ಪೊಲೀಸ್ ಇನ್ಸ್​​ಪೆಕ್ಟರ್ ನೇತೃತ್ವದಲ್ಲಿ ಕಳ್ಳ ಪೊಲೀಸ್ ಆಟವಂತೆ: ಹಣ ಬದಲಾವಣೆ-ಅಕ್ರಮ ಬಂಧನ-ಸಿಬ್ಬಂದಿಗೆ ಕಿರುಕುಳ ಆರೋಪ -TV9 Digitalನಲ್ಲಿ ಪ್ರಕರಣ ಬಟಾಬಯಲು

ಬಳಿಕ ಚಿನ್ನ ನೀಡುವುದಾಗಿ ಹೇಳಿ ಜ್ಯೋತಿಷಿ ಪತ್ನಿ ಮನೆಯಿಂದ ಹೊರಟಿದ್ದಾರೆ. ಮತ್ತೊಂದೆಡೆ ಮಗ ಕಿಡ್ನಾಪ್ ಆದ ಬಗ್ಗೆ ಜ್ಯೋತಿಷಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗಾಗಿ ಕಾರ್ಯಾಚರಣೆಗಿಳಿದ ಪೊಲೀಸರಿಂದ ಆರೋಪಿಯನ್ನು ಅರೆಸ್ಟ್​ ಮಾಡಿದ್ದು, ಬಳಿಕ ಆತ ಹೆದರಿಸಲು ಬಳಸಿದ ಗನ್​ ಡಮ್ಮಿ ಎನ್ನುವುದು ಪತ್ತೆ ಆಗಿದೆ.

ಸಿನಿಮಾಗಳಲ್ಲಿ ಬಳಸುವ ಮಾದರಿಯ ಗನ್ ಆರ್ಡರ್ ಕೊಟ್ಟು ಮಾಡಿಸಿಕೊಂಡಿದ್ದ. 38 ಸಾವಿರ ರೂ. ಕೊಟ್ಟು ಡಮ್ಮಿ ಗನ್ ಖರೀದಿ ಮಾಡಿದ್ದ. ಬಳಿಕ ಜ್ಯೋತಿಷಿ ನಿವಾಸದ ಬಳಿ ಒಂದು ತಿಂಗಳ ವಾಚ್​ ಮಾಡಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Wed, 9 August 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ