AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ

ಇನ್ನೂ ಮೀಸೆ ಚಿಗುರಿದ ಯುವಕ ಓರ್ವ, ಸಿನಿಮಾ ನೋಡಿ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್​ ಮಾಡಿ, 5 ಲಕ್ಷ ರೂ. ಡಿಮ್ಯಾಂಡ್​ ಮಾಡಿರುವಂತಹ ಘಟನೆ ಘಟನೆ ಆಗಸ್ಟ್​ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಕಿಡ್ನಾಪ್​ ಪ್ರಕರಣವನ್ನು ಹೆಚ್​ಎಸ್​ ಆರ್​ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.

ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Aug 09, 2023 | 4:28 PM

Share

ಬೆಂಗಳೂರು, ಆಗಸ್ಟ್​ 09: ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ (Astrologer) ಪುತ್ರನನ್ನು ಓರ್ವ ಯುವಕ ಕಿಡ್ನಾಪ್ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವಂತಹ ಘಟನೆ ಆಗಸ್ಟ್​ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿಷಿ ಮಣಿವಾಸಕನ್​ ಎಂಬವವರ 18 ವರ್ಷದ ಪುತ್ರನನ್ನು ಕಿಡ್ನಾಪ್​ ಮಾಡಲಾಗಿತ್ತು. ಸದ್ಯ ಕಿಡ್ನಾಪ್​ ಪ್ರಕರಣವನ್ನು ಹೆಚ್​ಎಸ್​ ಆರ್​ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.

ಗ್ಯಾರೇಜ್​ನಲ್ಲಿ ಕೆಲಸ

ಬಂಧಿತ ಯುವಕ ಅರ್ಜುನ್​​ ಮೂಲತಃ ತುಮಾಕೂರಿನವನು. ಪಿಯುಸಿ ಮುಗಿಸಿ ಬೆಂಗಳೂರಿಗೆ ಬಂದು ಪಿಜಿಯಲ್ಲಿ ವಾಸಿಸುತ್ತಿದ್ದ. ಸಾಧನೆ ಮಾಡಬೇಕೆಂದು ಅಂದುಕೊಂಡಿದ್ದವನು ಆದರೆ ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ ಸಿನಿಮಾ ನೋಡುತಿದ್ದ ಅರ್ಜುನ್​ನಿಂದ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್​ ಮಾಡುವ ಖತರ್ನಾಕ ಯೋಚನೆ ಬಂದಿದೆ.

ಇದನ್ನೂ ಓದಿ: ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಡಮ್ಮಿ ಗನ್​ ಬಳಕೆ

ಜ್ಯೋತಿಷಿ ಮಗ ಮೆಡಿಕಲ್ ಸೀಟ್​ಗಾಗಿ ಕೋಚಿಂಗ್​ಗೆ ತೆರಳುತ್ತಿದ್ದ. ತಮ್ಮದೇ ಕಾರ್​ನಲ್ಲಿ ಕೋಚಿಂಗ್ ತೆರಳುತ್ತಿದ್ದು, ಡ್ರಾಪ್ ಕೇಳುವ ನೆಪದಲ್ಲಿ, ಗನ್ ಹಣೆಗಿಟ್ಟು ಗಾಡಿ ಹೇಳಿದ ಕಡೆ ಹೊಗುವಂತೆ ಸೂಚಿಸಿ ಕಿಡ್ನಾಪ್​ ಮಾಡಲಾಗಿದೆ. ಬಳಿಕ ಜ್ಯೋತಿಷಿ ಹಾಗೂ ಅವರ ಪತ್ನಿಗೆ ವಾಟ್ಸ್​​ ಆ್ಯಪ್ ವಿಡಿಯೋ ಕಾಲ್​ ಮಾಡಿ,​ 5 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾನೆ.

ಇದನ್ನೂ ಓದಿ: ಪೊಲೀಸ್ ಇನ್ಸ್​​ಪೆಕ್ಟರ್ ನೇತೃತ್ವದಲ್ಲಿ ಕಳ್ಳ ಪೊಲೀಸ್ ಆಟವಂತೆ: ಹಣ ಬದಲಾವಣೆ-ಅಕ್ರಮ ಬಂಧನ-ಸಿಬ್ಬಂದಿಗೆ ಕಿರುಕುಳ ಆರೋಪ -TV9 Digitalನಲ್ಲಿ ಪ್ರಕರಣ ಬಟಾಬಯಲು

ಬಳಿಕ ಚಿನ್ನ ನೀಡುವುದಾಗಿ ಹೇಳಿ ಜ್ಯೋತಿಷಿ ಪತ್ನಿ ಮನೆಯಿಂದ ಹೊರಟಿದ್ದಾರೆ. ಮತ್ತೊಂದೆಡೆ ಮಗ ಕಿಡ್ನಾಪ್ ಆದ ಬಗ್ಗೆ ಜ್ಯೋತಿಷಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗಾಗಿ ಕಾರ್ಯಾಚರಣೆಗಿಳಿದ ಪೊಲೀಸರಿಂದ ಆರೋಪಿಯನ್ನು ಅರೆಸ್ಟ್​ ಮಾಡಿದ್ದು, ಬಳಿಕ ಆತ ಹೆದರಿಸಲು ಬಳಸಿದ ಗನ್​ ಡಮ್ಮಿ ಎನ್ನುವುದು ಪತ್ತೆ ಆಗಿದೆ.

ಸಿನಿಮಾಗಳಲ್ಲಿ ಬಳಸುವ ಮಾದರಿಯ ಗನ್ ಆರ್ಡರ್ ಕೊಟ್ಟು ಮಾಡಿಸಿಕೊಂಡಿದ್ದ. 38 ಸಾವಿರ ರೂ. ಕೊಟ್ಟು ಡಮ್ಮಿ ಗನ್ ಖರೀದಿ ಮಾಡಿದ್ದ. ಬಳಿಕ ಜ್ಯೋತಿಷಿ ನಿವಾಸದ ಬಳಿ ಒಂದು ತಿಂಗಳ ವಾಚ್​ ಮಾಡಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Wed, 9 August 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ