AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರಿಗೆ ಬಂದಿದ್ದ ಕೇರಳದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Jan 01, 2024 | 8:22 AM

Share

ಬೆಂಗಳೂರು, ಜನವರಿ 01: ಹೊಸ ವರ್ಷ (New Year) ಸಂಭ್ರಮಾಚರಣೆಗೆ ನಗರಕ್ಕೆ ಬಂದಿದ್ದ ಕೇರಳದ (Kerala) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ. ಸ್ಟಾಲಿನ್ ಹಲ್ಲೆಗೊಳಗಾದ ಯುವಕ. ನ್ಯೂ ಇಯರ್​ ಪಾರ್ಟಿಗೆಂದು ಯುವಕ ಸ್ಟಾಲಿನ್​ ಕೇರಳದಿಂದ ಬೆಂಗಳೂರಿಗೆ ಬಂದಿದ್ದಾನೆ. ಸ್ಟಾಲಿನ್​ ತನ್ನ ಗೆಳೆಯರ ಜೊತೆ ಪಬ್​ನಲ್ಲಿ ಪಾರ್ಟಿ ಮಾಡುತ್ತಿದ್ದನು.ಕೆಲ ಹೊತ್ತಿನ ಬಳಿಕ ಸ್ಟಾಲಿನ್​​ ಗೆಳೆಯರು ಪಬ್​ನಿಂದ ಹೊರಗೆ ಬಂದಿದ್ದಾರೆ. ಹೀಗೆ ಹೊರಗೆ ಬಂದವರು ಯುವತಿಯನ್ನು ಟಚ್​ ಮಾಡಿದ್ದಾರೆ ಎಂದು ಸ್ಟಾಲಿನ್​ ಗೆಳಯರ ಜೊತೆ ಇಬ್ಬರು ಯುವಕರು ಜಗಳ ತೆಗೆದಿದ್ದಾರೆ.

ಇದನ್ನು ತಿಳಿದ ಸ್ಟಾಲಿನ್,​ ಏನಾಯ್ತು ಎಂದು ಘಟನಾ ಸ್ಥಳಕ್ಕೆ ಬಂದು ನೋಡುತ್ತಿದ್ದಾಗ ಆ ಇಬ್ಬರು ಯುವಕರು ಸ್ಟಾಲಿನ್ ಮೇಲೂ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಸ್ಟಾಲಿನ್​ ಅವರ ಹಲ್ಲು ಮುರಿದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ತಡೆದಿದ್ದಾರೆ. ಬಳಿಕ ಪೊಲೀಸರು ವಿಚಾರಿಸಿದಾಗ ತಾನು ಕೇರಳದ ಎಸ್ಪಿ ಎಜೆ ಬಾಬು ಪುತ್ರ ಎಂದು ಸ್ಟಾಲಿನ್​ ಹೇಳಿದ್ದಾನೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ