AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರಿಗೆ ಬಂದಿದ್ದ ಕೇರಳದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Jan 01, 2024 | 8:22 AM

Share

ಬೆಂಗಳೂರು, ಜನವರಿ 01: ಹೊಸ ವರ್ಷ (New Year) ಸಂಭ್ರಮಾಚರಣೆಗೆ ನಗರಕ್ಕೆ ಬಂದಿದ್ದ ಕೇರಳದ (Kerala) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ. ಸ್ಟಾಲಿನ್ ಹಲ್ಲೆಗೊಳಗಾದ ಯುವಕ. ನ್ಯೂ ಇಯರ್​ ಪಾರ್ಟಿಗೆಂದು ಯುವಕ ಸ್ಟಾಲಿನ್​ ಕೇರಳದಿಂದ ಬೆಂಗಳೂರಿಗೆ ಬಂದಿದ್ದಾನೆ. ಸ್ಟಾಲಿನ್​ ತನ್ನ ಗೆಳೆಯರ ಜೊತೆ ಪಬ್​ನಲ್ಲಿ ಪಾರ್ಟಿ ಮಾಡುತ್ತಿದ್ದನು.ಕೆಲ ಹೊತ್ತಿನ ಬಳಿಕ ಸ್ಟಾಲಿನ್​​ ಗೆಳೆಯರು ಪಬ್​ನಿಂದ ಹೊರಗೆ ಬಂದಿದ್ದಾರೆ. ಹೀಗೆ ಹೊರಗೆ ಬಂದವರು ಯುವತಿಯನ್ನು ಟಚ್​ ಮಾಡಿದ್ದಾರೆ ಎಂದು ಸ್ಟಾಲಿನ್​ ಗೆಳಯರ ಜೊತೆ ಇಬ್ಬರು ಯುವಕರು ಜಗಳ ತೆಗೆದಿದ್ದಾರೆ.

ಇದನ್ನು ತಿಳಿದ ಸ್ಟಾಲಿನ್,​ ಏನಾಯ್ತು ಎಂದು ಘಟನಾ ಸ್ಥಳಕ್ಕೆ ಬಂದು ನೋಡುತ್ತಿದ್ದಾಗ ಆ ಇಬ್ಬರು ಯುವಕರು ಸ್ಟಾಲಿನ್ ಮೇಲೂ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಸ್ಟಾಲಿನ್​ ಅವರ ಹಲ್ಲು ಮುರಿದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ತಡೆದಿದ್ದಾರೆ. ಬಳಿಕ ಪೊಲೀಸರು ವಿಚಾರಿಸಿದಾಗ ತಾನು ಕೇರಳದ ಎಸ್ಪಿ ಎಜೆ ಬಾಬು ಪುತ್ರ ಎಂದು ಸ್ಟಾಲಿನ್​ ಹೇಳಿದ್ದಾನೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ