ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ […]

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ
ಸಾಧು ಶ್ರೀನಾಥ್​

Updated on: Nov 21, 2019 | 2:04 PM

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:19 pm, Thu, 21 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us