AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಚ್ಚಿನಿಂದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಆರೋಪಿಗಳು ಪರಾರಿ

ಎರಡು ಪ್ರತ್ಯೇಕ ಘಟನೆ: ಮಚ್ಚಿನಿಂದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸುಬ್ರಹ್ಮಣ್ಯನಗರದ ಗಾಯತ್ರಿ ನಗರದಲ್ಲಿ ತಡರಾತ್ರಿ ನಡೆದಿದೆ. ಕುಡಿದು ವಾಹನ ಚಲಾಯಿಸಿದ್ದಲ್ಲದೇ, ತಪಾಸಣೆಗೆ ಬಂದ ಮಲ್ಲೇಶ್ವರಂ ಸಂಚಾರ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದ ಯುವಕರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ.

ಬೆಂಗಳೂರು: ಮಚ್ಚಿನಿಂದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಆರೋಪಿಗಳು ಪರಾರಿ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 16, 2023 | 6:56 AM

Share

ಬೆಂಗಳೂರು ಅ.16: ಮಚ್ಚಿನಿಂದ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ (Attack) ಮಾಡಿರುವ ಘಟನೆ ಸುಬ್ರಹ್ಮಣ್ಯನಗರದ ಗಾಯತ್ರಿ ನಗರದಲ್ಲಿ ತಡರಾತ್ರಿ ನಡೆದಿದೆ. ಅಭಿಗೌಡ ಆ್ಯಂಡ್​​​ ಗ್ಯಾಂಗ್​ ಹಲ್ಲೆ ಮಾಡಿದೆ. ಗಾಯತ್ರಿ ನಗರದಲ್ಲಿ ಗಣೇಶ ಕೂಡಿಸುವ ವಿಚಾರಕ್ಕೆ ಅಭಿಗೌಡ ಮತ್ತು ರಾಕೇಶ್ ಎಂಬಾತನ ನಡುವೆ ಬಹಳ ದಿನಗಳಿಂದ ವೈಷಮ್ಯವಿದೆ. ಈ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿರುತ್ತದೆ.

ನಿನ್ನೆ (ಅ.15) ರಾಕೇಶ್ ಮನೆಗೆ ನುಗ್ಗಿ​ ಹಲ್ಲೆ ನಡೆಸಲು ಅಭಿಗೌಡ‌‌ ಪ್ಲಾನ್​ ಮಾಡಿದ್ದನು. ಆದರೆ ಅಭಿಗೌಡ ರಾಕೇಶ್​ ಮನೆ ಬದಲು ಆತನ ಪಕ್ಕದ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಇದರಿಂದ ಮಹಿಳೆಯ ಕೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಡ್ರಿಂಕ್​ ಆ್ಯಂಡ್​ ಡ್ರೈವ್​​: ಯುವಕರನ್ನ ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕುಡಿದು ವಾಹನ ಚಲಾಯಿಸಿದ್ದಲ್ಲದೇ, ತಪಾಸಣೆಗೆ ಬಂದ ಮಲ್ಲೇಶ್ವರಂ ಸಂಚಾರ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದ ಯುವಕರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ. ಶ್ರೀರಾಮಪುರ ಮೆಟ್ರೋ ನಿಲ್ದಾಣದ ಬಳಿ ತಡರಾತ್ರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಕುಡಿದು ಕಾರು ಚಲಾಯಿಸುತ್ತಿದ್ದ ಯುವಕರನ್ನು ತಡೆದಿದ್ದಾರೆ.

ಇದನ್ನೂ ಓದಿ: ರಾಮನಗರ: ಮಳೆಯಲ್ಲೇ ಬಿತ್ತು ರೌಡಿಶೀಟರ್ ಹೆಣ! ಅಕ್ರಮ ಸಂಬಂಧಕ್ಕಾಗಿಯೇ ನಡೀತಾ ಹತ್ಯೆ?

ತಪಾಸಣೆ ವೇಳೆ ಯುವಕರಿದ್ದ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಪ್ರಶ್ನಿಸುತ್ತಿದ್ದಂತೆ ಯುವಕರು ಮದ್ಯದ ಬಾಟಲಿಗಳನ್ನು ಕಾರಿನಿಂದ ಹೊರಗೆ ಎಸೆದು ಗಲಾಟೆ ಮಾಡಿದ್ದಾರೆ. ಅಲ್ಲದೆ ಪೊಲೀಸರನ್ನು ತಳ್ಳಿ ಕಾರು ಸಮೇತ ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಯುವಕರನ್ನು ಸಿನಿಮೀಯ ರೀತಿಯಲ್ಲಿ ಚೇಸ್​ ಮಾಡಿ ಅಡ್ಡಹಾಕಿದ್ದಾರೆ. ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ