Bengaluru News: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ

ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಜೋಗಿಶ್ ಎಂಬುವವನು ಚಾಕು ಇರಿತಕ್ಕೊಳಗಾದ ವ್ಯಕ್ತಿ. ಇನ್ನು ಚಾಕು ಇರಿಯಲು ಕಾರಣ ಇಲ್ಲಿದೆ ನೋಡಿ.

Bengaluru News: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ
ಆರೋಪಿ ಮಹಿಳೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 23, 2023 | 8:19 AM

ಬೆಂಗಳೂರು: ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ(Bengaluru) ವಿವೇಕನಗರದಲ್ಲಿ ನಡೆದಿದೆ. ಜೋಗಿಶ್ ಚಾಕು ಇರಿತಕ್ಕೊಳಗಾದ ವ್ಯಕ್ತಿ. ವೃತ್ತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಜೋಗಿಶ್, ಡೇ ಕೇರ್​ನಲ್ಲಿ ಕೆಲಸ ಮಾಡುತಿದ್ದ ಜುಂಟಿದಾಸ್ ಎಂಬ ಮಹಿಳೆ ಜೊತೆ ಎರಡು ವರ್ಷದಿಂದ ಪ್ರೀತಿಯಲ್ಲಿದ್ದನು. ಜುಂಟಿ ದಾಸ್ ಕೂಡ ಈ ಹಿಂದೆ ಬೇರೊಂದು ಮದುವೆಯಾಗಿ, ಗಂಡನಿಗೆ ವಿಚ್ಛೇಧನ ನೀಡಿ, ತನ್ನ 18 ವರ್ಷದ ಮಗಳೊಂದಿಗೆ ಜಿಗಿಣಿಯಲ್ಲಿ ವಾಸ ಮಾಡುತ್ತಿದ್ದಳು. ಈ ಮಧ್ಯೆ ಜೋಗಿಶ್​ ಜೊತೆ ಪ್ರೀತಿಯಲ್ಲಿದ್ದಾಗ ಹಲವು ಕಡೆ ಸುತ್ತಾಡಿದ್ದ ಇವರಿಬ್ಬರು, ಮಹಿಳೆಯಿಂದ ಒಂದಿಷ್ಟು ಹಣ ಸಹ ಪಡೆದಿದ್ದ ಜೋಗೀಶ್.

ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ ಜೋಗಿಶ್​

ಇಷ್ಟೇ ಆಗಿದ್ದರೆ ಎಲ್ಲವೂ ಸರಿಯಾಗಿಯೇ ಇರುತ್ತಿತ್ತು. ಆದರೆ, ಜೋಗಿಶ್​ ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ. ಈ ವಿಚಾರ ತಿಳಿದ ಆರೋಪಿ ಮಹಿಳೆ ವಿವೇಕನಗರದ ಜೋಗಿಶ್ ಮನೆಗೆ ಬಂದು ಗಲಾಟೆ ಮಾಡಿದ್ದಾಳೆ. ಈ ವೇಳೆ ಜಗಳ ಅತಿರೇಕಕ್ಕೆ ಹೋಗಿ ಮಹಿಳೆ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾಳೆ. ಹೌದು ಅಸ್ಸಾಂಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದ ಆರೋಪಿ ಮಹಿಳೆ, ವಿಲ್ಸನ್ ಗಾರ್ಡ್​ನಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿದ್ದಳು. ಈ ವೇಳೆ ಪೊಲೀಸರು ಆಕೆಯನ್ನ ಬಂಧಿಸಿದ್ದಾರೆ. ಸದ್ಯ ಗಾಯಾಳು ಜೋಗೀಶ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ ಚಾಕು ಇರಿದ ಅಪ್ರಾಪ್ತ ಬಾಲಕಿ

ಯಾರ್ಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಬೈಕ್ ಸವಾರ ಬಂಧನ

ಬೆಂಗಳೂರು: ಯಾರ್ಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹಾವೇರಿ ಮೂಲದ ಗುರುವೆಂಕಟಪ್ಪನನ್ನ ಬಂಧಿಸಲಾಗಿದೆ. ಇತ ಸಂಪಂಗಿರಾಮನಗರದಲ್ಲಿ ಸ್ನೇಹಿತನೊಂದಿಗೆ ವಾಸವಿದ್ದ. ಶುಕ್ರವಾರ ರೂಂನಲ್ಲಿದ್ದಾಗ ಗೆಳೆಯನ ಬೈಕ್​ನಲ್ಲಿ ಹೊರ ಬಂದಿದ್ದ. ಈ ವೇಳೆ ಅದೇ ಬೈಕ್​ನಲ್ಲಿ ರ್ಯಾಪಿಡೊ ಮುಖಾಂತರ ಯುವತಿ ಪಿಕ್ ಮಾಡಿದ್ದಾನೆ. ಮಾರ್ಗ ಮಧ್ಯೆ ಯುವತಿ ಜೊತೆ ಆತ ಅಸಭ್ಯ ವರ್ತನೆ ಆರೋಪ ಮಾಡಿದ್ದಳು. ಈ ಹಿನ್ನಲೆ ನಿಗದಿತ ಸ್ಥಳದಲ್ಲಿ ಆಕೆಯನ್ನ ತಲುಪಿಸದೇ ಅರ್ಧದಲ್ಲೇ ಬಿಟ್ಟು ಹೋದ ಆರೋಪ ಮಾಡಿದ್ದ ಯುವತಿ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಳು. ಈ ಕುರತು ಪ್ರಕರಣ ದಾಖಲಿಸಿಕೊಂಡು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 am, Sun, 23 July 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ