AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ

ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಜೋಗಿಶ್ ಎಂಬುವವನು ಚಾಕು ಇರಿತಕ್ಕೊಳಗಾದ ವ್ಯಕ್ತಿ. ಇನ್ನು ಚಾಕು ಇರಿಯಲು ಕಾರಣ ಇಲ್ಲಿದೆ ನೋಡಿ.

Bengaluru News: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ
ಆರೋಪಿ ಮಹಿಳೆ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 23, 2023 | 8:19 AM

Share

ಬೆಂಗಳೂರು: ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ(Bengaluru) ವಿವೇಕನಗರದಲ್ಲಿ ನಡೆದಿದೆ. ಜೋಗಿಶ್ ಚಾಕು ಇರಿತಕ್ಕೊಳಗಾದ ವ್ಯಕ್ತಿ. ವೃತ್ತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಜೋಗಿಶ್, ಡೇ ಕೇರ್​ನಲ್ಲಿ ಕೆಲಸ ಮಾಡುತಿದ್ದ ಜುಂಟಿದಾಸ್ ಎಂಬ ಮಹಿಳೆ ಜೊತೆ ಎರಡು ವರ್ಷದಿಂದ ಪ್ರೀತಿಯಲ್ಲಿದ್ದನು. ಜುಂಟಿ ದಾಸ್ ಕೂಡ ಈ ಹಿಂದೆ ಬೇರೊಂದು ಮದುವೆಯಾಗಿ, ಗಂಡನಿಗೆ ವಿಚ್ಛೇಧನ ನೀಡಿ, ತನ್ನ 18 ವರ್ಷದ ಮಗಳೊಂದಿಗೆ ಜಿಗಿಣಿಯಲ್ಲಿ ವಾಸ ಮಾಡುತ್ತಿದ್ದಳು. ಈ ಮಧ್ಯೆ ಜೋಗಿಶ್​ ಜೊತೆ ಪ್ರೀತಿಯಲ್ಲಿದ್ದಾಗ ಹಲವು ಕಡೆ ಸುತ್ತಾಡಿದ್ದ ಇವರಿಬ್ಬರು, ಮಹಿಳೆಯಿಂದ ಒಂದಿಷ್ಟು ಹಣ ಸಹ ಪಡೆದಿದ್ದ ಜೋಗೀಶ್.

ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ ಜೋಗಿಶ್​

ಇಷ್ಟೇ ಆಗಿದ್ದರೆ ಎಲ್ಲವೂ ಸರಿಯಾಗಿಯೇ ಇರುತ್ತಿತ್ತು. ಆದರೆ, ಜೋಗಿಶ್​ ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ. ಈ ವಿಚಾರ ತಿಳಿದ ಆರೋಪಿ ಮಹಿಳೆ ವಿವೇಕನಗರದ ಜೋಗಿಶ್ ಮನೆಗೆ ಬಂದು ಗಲಾಟೆ ಮಾಡಿದ್ದಾಳೆ. ಈ ವೇಳೆ ಜಗಳ ಅತಿರೇಕಕ್ಕೆ ಹೋಗಿ ಮಹಿಳೆ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾಳೆ. ಹೌದು ಅಸ್ಸಾಂಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದ ಆರೋಪಿ ಮಹಿಳೆ, ವಿಲ್ಸನ್ ಗಾರ್ಡ್​ನಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿದ್ದಳು. ಈ ವೇಳೆ ಪೊಲೀಸರು ಆಕೆಯನ್ನ ಬಂಧಿಸಿದ್ದಾರೆ. ಸದ್ಯ ಗಾಯಾಳು ಜೋಗೀಶ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ ಚಾಕು ಇರಿದ ಅಪ್ರಾಪ್ತ ಬಾಲಕಿ

ಯಾರ್ಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಬೈಕ್ ಸವಾರ ಬಂಧನ

ಬೆಂಗಳೂರು: ಯಾರ್ಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹಾವೇರಿ ಮೂಲದ ಗುರುವೆಂಕಟಪ್ಪನನ್ನ ಬಂಧಿಸಲಾಗಿದೆ. ಇತ ಸಂಪಂಗಿರಾಮನಗರದಲ್ಲಿ ಸ್ನೇಹಿತನೊಂದಿಗೆ ವಾಸವಿದ್ದ. ಶುಕ್ರವಾರ ರೂಂನಲ್ಲಿದ್ದಾಗ ಗೆಳೆಯನ ಬೈಕ್​ನಲ್ಲಿ ಹೊರ ಬಂದಿದ್ದ. ಈ ವೇಳೆ ಅದೇ ಬೈಕ್​ನಲ್ಲಿ ರ್ಯಾಪಿಡೊ ಮುಖಾಂತರ ಯುವತಿ ಪಿಕ್ ಮಾಡಿದ್ದಾನೆ. ಮಾರ್ಗ ಮಧ್ಯೆ ಯುವತಿ ಜೊತೆ ಆತ ಅಸಭ್ಯ ವರ್ತನೆ ಆರೋಪ ಮಾಡಿದ್ದಳು. ಈ ಹಿನ್ನಲೆ ನಿಗದಿತ ಸ್ಥಳದಲ್ಲಿ ಆಕೆಯನ್ನ ತಲುಪಿಸದೇ ಅರ್ಧದಲ್ಲೇ ಬಿಟ್ಟು ಹೋದ ಆರೋಪ ಮಾಡಿದ್ದ ಯುವತಿ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಳು. ಈ ಕುರತು ಪ್ರಕರಣ ದಾಖಲಿಸಿಕೊಂಡು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 am, Sun, 23 July 23

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ