AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ

ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಜೋಗಿಶ್ ಎಂಬುವವನು ಚಾಕು ಇರಿತಕ್ಕೊಳಗಾದ ವ್ಯಕ್ತಿ. ಇನ್ನು ಚಾಕು ಇರಿಯಲು ಕಾರಣ ಇಲ್ಲಿದೆ ನೋಡಿ.

Bengaluru News: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ
ಆರೋಪಿ ಮಹಿಳೆ
Jagadisha B
| Edited By: |

Updated on:Jul 23, 2023 | 8:19 AM

Share

ಬೆಂಗಳೂರು: ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ(Bengaluru) ವಿವೇಕನಗರದಲ್ಲಿ ನಡೆದಿದೆ. ಜೋಗಿಶ್ ಚಾಕು ಇರಿತಕ್ಕೊಳಗಾದ ವ್ಯಕ್ತಿ. ವೃತ್ತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಜೋಗಿಶ್, ಡೇ ಕೇರ್​ನಲ್ಲಿ ಕೆಲಸ ಮಾಡುತಿದ್ದ ಜುಂಟಿದಾಸ್ ಎಂಬ ಮಹಿಳೆ ಜೊತೆ ಎರಡು ವರ್ಷದಿಂದ ಪ್ರೀತಿಯಲ್ಲಿದ್ದನು. ಜುಂಟಿ ದಾಸ್ ಕೂಡ ಈ ಹಿಂದೆ ಬೇರೊಂದು ಮದುವೆಯಾಗಿ, ಗಂಡನಿಗೆ ವಿಚ್ಛೇಧನ ನೀಡಿ, ತನ್ನ 18 ವರ್ಷದ ಮಗಳೊಂದಿಗೆ ಜಿಗಿಣಿಯಲ್ಲಿ ವಾಸ ಮಾಡುತ್ತಿದ್ದಳು. ಈ ಮಧ್ಯೆ ಜೋಗಿಶ್​ ಜೊತೆ ಪ್ರೀತಿಯಲ್ಲಿದ್ದಾಗ ಹಲವು ಕಡೆ ಸುತ್ತಾಡಿದ್ದ ಇವರಿಬ್ಬರು, ಮಹಿಳೆಯಿಂದ ಒಂದಿಷ್ಟು ಹಣ ಸಹ ಪಡೆದಿದ್ದ ಜೋಗೀಶ್.

ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ ಜೋಗಿಶ್​

ಇಷ್ಟೇ ಆಗಿದ್ದರೆ ಎಲ್ಲವೂ ಸರಿಯಾಗಿಯೇ ಇರುತ್ತಿತ್ತು. ಆದರೆ, ಜೋಗಿಶ್​ ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ. ಈ ವಿಚಾರ ತಿಳಿದ ಆರೋಪಿ ಮಹಿಳೆ ವಿವೇಕನಗರದ ಜೋಗಿಶ್ ಮನೆಗೆ ಬಂದು ಗಲಾಟೆ ಮಾಡಿದ್ದಾಳೆ. ಈ ವೇಳೆ ಜಗಳ ಅತಿರೇಕಕ್ಕೆ ಹೋಗಿ ಮಹಿಳೆ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾಳೆ. ಹೌದು ಅಸ್ಸಾಂಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದ ಆರೋಪಿ ಮಹಿಳೆ, ವಿಲ್ಸನ್ ಗಾರ್ಡ್​ನಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿದ್ದಳು. ಈ ವೇಳೆ ಪೊಲೀಸರು ಆಕೆಯನ್ನ ಬಂಧಿಸಿದ್ದಾರೆ. ಸದ್ಯ ಗಾಯಾಳು ಜೋಗೀಶ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ ಚಾಕು ಇರಿದ ಅಪ್ರಾಪ್ತ ಬಾಲಕಿ

ಯಾರ್ಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಬೈಕ್ ಸವಾರ ಬಂಧನ

ಬೆಂಗಳೂರು: ಯಾರ್ಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹಾವೇರಿ ಮೂಲದ ಗುರುವೆಂಕಟಪ್ಪನನ್ನ ಬಂಧಿಸಲಾಗಿದೆ. ಇತ ಸಂಪಂಗಿರಾಮನಗರದಲ್ಲಿ ಸ್ನೇಹಿತನೊಂದಿಗೆ ವಾಸವಿದ್ದ. ಶುಕ್ರವಾರ ರೂಂನಲ್ಲಿದ್ದಾಗ ಗೆಳೆಯನ ಬೈಕ್​ನಲ್ಲಿ ಹೊರ ಬಂದಿದ್ದ. ಈ ವೇಳೆ ಅದೇ ಬೈಕ್​ನಲ್ಲಿ ರ್ಯಾಪಿಡೊ ಮುಖಾಂತರ ಯುವತಿ ಪಿಕ್ ಮಾಡಿದ್ದಾನೆ. ಮಾರ್ಗ ಮಧ್ಯೆ ಯುವತಿ ಜೊತೆ ಆತ ಅಸಭ್ಯ ವರ್ತನೆ ಆರೋಪ ಮಾಡಿದ್ದಳು. ಈ ಹಿನ್ನಲೆ ನಿಗದಿತ ಸ್ಥಳದಲ್ಲಿ ಆಕೆಯನ್ನ ತಲುಪಿಸದೇ ಅರ್ಧದಲ್ಲೇ ಬಿಟ್ಟು ಹೋದ ಆರೋಪ ಮಾಡಿದ್ದ ಯುವತಿ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಳು. ಈ ಕುರತು ಪ್ರಕರಣ ದಾಖಲಿಸಿಕೊಂಡು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 am, Sun, 23 July 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ