AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ನಿಂದನೆ, ಹಲ್ಲೆ ಯತ್ನ ಆರೋಪ: ಕೊತ್ತನೂರು ಪೊಲೀಸರಿಂದ ಆಟೋ ಚಾಲಕ ಅರೆಸ್ಟ್​

ಈಶಾನ್ಯ ಭಾರತ ಮೂಲದ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಆರೋಪದ ಹಿನ್ನಲೆ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 2ರ ಸಂಜೆ 7.30ರ ಸುಮಾರಿಗೆ ಬೆಂಗಳೂರಲ್ಲಿ ನಡೆದಿದ್ದ ಘಟನೆ ಸಂಬಂಧ ಕೊತ್ತನೂರು ಪೊಲೀಸರಿಗೆ ಯುವತಿ ದೂರು ನೀಡಿದ್ದಳು. ಆ ಬೆನ್ನಲ್ಲೇ ಆಟೋ ಚಾಲಕನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಯುವತಿಗೆ ನಿಂದನೆ, ಹಲ್ಲೆ ಯತ್ನ ಆರೋಪ: ಕೊತ್ತನೂರು ಪೊಲೀಸರಿಂದ ಆಟೋ ಚಾಲಕ ಅರೆಸ್ಟ್​
ಆಟೋ ಚಾಲಕನ ಬಂಧನ
ಪ್ರಸನ್ನ ಹೆಗಡೆ
|

Updated on:Oct 10, 2025 | 7:43 PM

Share

ಬೆಂಗಳೂರು, ಅಕ್ಟೋಬರ್​ 10: ಆಟೋ ಬುಕ್​ ಮಾಡಿ ಕ್ಯಾನ್ಸಲ್​ ಮಾಡಿದ ವಿಚಾರವಾಗಿ ಯುವತಿಗೆ ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಹಲ್ಲೆಗೆ ಯತ್ನಿಸಿರುವ ಆರೋಪದ ಹಿನ್ನಲೆ ಆಟೋ  ಚಾಲಕನನ್ನು (Auto Driver) ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪವನ್ ಎಂದು ಗುರುತಿಸಲಾಗಿದ್ದು, ಆಟೋ ವಿಚಾರವಾಗಿ ಈಶಾನ್ಯ ಭಾರತ ಮೂಲದ ಯುವತಿ ಜೊತೆಗೆ ಈತನ ಗಲಾಟೆಯ ವಿಡಿಯೋ ವೈರಲ್​ ಆಗಿತ್ತು.

ಅಕ್ಟೋಬರ್ 2ರ ಸಂಜೆ 7.30ರ ಸುಮಾರಿಗೆ ಈಶಾನ್ಯ ಭಾರತ ಮೂಲದ ಯುವತಿ ಕ್ಯಾಲಸನಹಳ್ಳಿಯಿಂದ ಬಾಣಸವಾಡಿಗೆ ತೆರಳಲು ಆಟೋ ಬುಕ್ ಮಾಡಿದ್ದಳು. ಆದರೆ ಬುಕ್ ಮಾಡಿದ್ದ ಆಟೋ ಬರೋದು ತಡವಾದ ಕಾರಣ, ಈ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಆಟೋವನ್ನು ಆಕೆ ಹತ್ತಿದ್ದಳು. ಹಾಗೆಯೇ ಬುಕ್​ ಮಾಡಿದ್ದ ಆಟೋವನ್ನು ಕ್ಯಾನ್ಸಲ್​ ಮಾಡಿದ್ದಳು. ಆದರೆ ಈವೇಳೆಗೆ ಬುಕ್​ ಮಾಡಿದ್ದ ಆಟೋ ಕೂಡ ಸ್ಥಳ ತಲುಪಿದ್ದು, ಬೇರೆ ಆಟೋ ಹತ್ತಿ ಹೊರಟ ಯುವತಿ ಬಳಿ ಚಾಲಕ ಪವನ್ ಜಗಳ ತೆಗೆದಿದ್ದಾರೆ. ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಹೊಡೆಯಲು ಯತ್ನ ಮಾಡಿರುವ ಬಗ್ಗೆ ಯುವತಿ ಆರೋಪಿಸಿದ್ದಳು. ಘಟನೆ ಬಗ್ಗೆ ಕೊತ್ತನೂರು ಠಾಣೆಗೆ ದೂರನ್ನೂ ನೀಡಿದ್ದಳು. ಆ ದೂರು ಆಧರಿಸಿ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಏಕಕಾಲಕ್ಕೆ ಎರಡು ಆಟೋ ಬುಕ್​ ಮಾಡಿದ ಯುವತಿ, ರೊಚ್ಚಿಗೆದ್ದ ಆಟೋ ಚಾಲಕ

ಪರ-ವಿರೋಧ ಚರ್ಚೆ

ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರೂ ಕ್ಯಾರೇ ಎನ್ನದ ಆಟೋ ಚಾಲಕ ಪದೇ ಪದೆ ಹಲ್ಲೆಗೆ ಯತ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಳು. ಅಲ್ಲದೆ ಆ್ಯಪ್​ ಗಳ ಮೂಲಕ ಬುಕ್ಕಿಂಗ್​ ಮಾಡಿ ತೆರಳುವ ಆಟೋಗಳಲ್ಲಿನ ಸುರಕ್ಷತೆ ಬಗ್ಗೆಯೂ ಪ್ರಶ್ನೆ ಮಾಡಿ ವಿಡಿಯೋ ಹಂಚಿಕೊಂಡಿದ್ದಳು. ಆ ಬೆನ್ನಲ್ಲೇ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳು ಶುರುವಾಗಿವೆ. ಕೆಲವರು ಯುವತಿಯನ್ನು ಬೆಂಬಲಿಸಿದ್ದರೆ, ಇನ್ನು ಕೆಲವರು ಒಂದು ಆಟೋ ಬುಕ್​ ಮಾಡಿ ಮತ್ತೊಂದರಲ್ಲಿ ಹೋಗಿದ್ದು ತಪ್ಪಲ್ಲವಾ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:40 pm, Fri, 10 October 25

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!