AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋಗಳ ಪರಸ್ಪರ ಡಿಕ್ಕಿ: ಇಬ್ಬರನ್ನು ಚಾಕುವಿನಿಂದ ಇರಿದು ಕೊಂದ ಚಾಲಕ

ಮೈಸೂರು: ಲಗೇಜ್ ಆಟೋ ಹಾಗೂ ಪ್ಯಾಸೆಂಜರ್ ಆಟೋ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಕೋಟೆ ಹುಂಡಿಯಲ್ಲಿ ನಡೆದಿದೆ. ಟಿ.ಮಂಜುನಾಥ್(33), ಆರ್.ಮಂಜುನಾಥ್(35) ಕೊಲೆಯಾದವರು. ಪ್ಯಾಸೆಂಜರ್ ಆಟೋಗೆ ಲಗೇಜ್ ಆಟೋ ಟಚ್ ಆದ ಕಾರಣ ಗಲಾಟೆ ಶುರುವಾಗಿದೆ. ಲಗೇಜ್ ಆಟೋದಲ್ಲಿ ಟಿ.ಮಂಜುನಾಥ್, ಆರ್.ಮಂಜುನಾಥ್ ಮತ್ತು ಮೂರ್ತಿ ಎಂಬುವವರಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಪ್ಯಾಸೆಂಜರ್ ಆಟೋ ಚಾಲಕ ಯೋಗೇಶ್(23) ಇರಿದು ಇಬ್ಬರನ್ನು ಕೊಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆರ್.ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದು, […]

ಆಟೋಗಳ ಪರಸ್ಪರ ಡಿಕ್ಕಿ: ಇಬ್ಬರನ್ನು ಚಾಕುವಿನಿಂದ ಇರಿದು ಕೊಂದ ಚಾಲಕ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 25, 2020 | 9:46 AM

Share

ಮೈಸೂರು: ಲಗೇಜ್ ಆಟೋ ಹಾಗೂ ಪ್ಯಾಸೆಂಜರ್ ಆಟೋ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಕೋಟೆ ಹುಂಡಿಯಲ್ಲಿ ನಡೆದಿದೆ. ಟಿ.ಮಂಜುನಾಥ್(33), ಆರ್.ಮಂಜುನಾಥ್(35) ಕೊಲೆಯಾದವರು.

ಪ್ಯಾಸೆಂಜರ್ ಆಟೋಗೆ ಲಗೇಜ್ ಆಟೋ ಟಚ್ ಆದ ಕಾರಣ ಗಲಾಟೆ ಶುರುವಾಗಿದೆ. ಲಗೇಜ್ ಆಟೋದಲ್ಲಿ ಟಿ.ಮಂಜುನಾಥ್, ಆರ್.ಮಂಜುನಾಥ್ ಮತ್ತು ಮೂರ್ತಿ ಎಂಬುವವರಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಪ್ಯಾಸೆಂಜರ್ ಆಟೋ ಚಾಲಕ ಯೋಗೇಶ್(23) ಇರಿದು ಇಬ್ಬರನ್ನು ಕೊಲೆ ಮಾಡಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಆರ್.ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದು, ಟಿ.ಮಂಜುನಾಥ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಮೂರ್ತಿ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಯೋಗೇಶ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಸಹ ಕೆಲ ಅಪರಾಧ ಪ್ರಕರಣಗಳಲ್ಲಿ ಯೋಗೇಶ್ ಭಾಗಿಯಾಗಿದ್ದ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ