AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಹಣ್ಣಿನ ವ್ಯಾಪಾರ, ರಾತ್ರಿ ಆಟೋ ಕಳ್ಳತನ -14 ಆಟೋಗಳ ಎಗರಿಸಿದ್ದ ಖದೀಮ ಅಂದರ್ ಆದ ಕತೆಯಿದು!

ಸುಲಭವಾಗಿ ಆಟೋಗಳನ್ನ ಕಳ್ಳತನ ಮಾಡಿಕೊಂಡು ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ 8 ರಿಂದ 15 ಸಾವಿರಗಳಿಗೆ ಮಾರಾಟ ಮಾಡುತ್ತಿದ್ದ.

ಬೆಳಗ್ಗೆ ಹಣ್ಣಿನ ವ್ಯಾಪಾರ, ರಾತ್ರಿ ಆಟೋ ಕಳ್ಳತನ -14 ಆಟೋಗಳ ಎಗರಿಸಿದ್ದ ಖದೀಮ ಅಂದರ್ ಆದ ಕತೆಯಿದು!
14 ಆಟೋಗಳ ಎಗರಿಸಿದ್ದ ಖದೀಮ ಅಂದರ್ ಆದ ಕತೆಯಿದು!
TV9 Web
| Updated By: ಸಾಧು ಶ್ರೀನಾಥ್​|

Updated on: Jan 18, 2023 | 6:18 PM

Share

ರಾಮನಗರ: ಆ ನಗರದ ಆಟೋ ಚಾಲಕರೆಲ್ಲ (Auto rickshaw) ಆತಂಕಗೊಂಡಿದ್ರು. ಮನೆಯ ಮುಂದೆ ನಿಲ್ಲಿಸಿದ ಆಟೋಗಳು ರಾತ್ರೋರಾತ್ರಿ ಅಬೇಸ್ ಆಗುತ್ತಿದ್ದವು. ಹೊಟ್ಟೆ ಪಾಡಿಗೆಂದು ಇದ್ದ ಆಧಾರವೇ ಇಲ್ಲದಂತಾಗಿತ್ತು ಅಂದ್ರೆ ಆಟೋ ಚಾಲಕರು ತಾನೆ ಏನು ಮಾಡಬೇಕು. ಆದರೆ ಕೊನೆಗೂ ಆಟೋ ಚಾಲಕರ ನಿದ್ರೆ ಗೆಡಿಸಿದ್ದ ಆ ಖತರ್ನಾಕ್ ಪೊಲೀಸರ ಬಲೆಗೆ ಬಿದ್ದಿದ್ದಾನೆ ಅನ್ನೀ. ಹೌದು ರೇಷ್ಮೆನಗರಿ ರಾಮನಗರ ಜಿಲ್ಲೆಯ ಆಟೋ ಚಾಲಕರ ನಿದ್ರೆಗೆಡಿಸಿದ್ದ ಖತರ್ನಾಕ್ ಗೆ ಕೊನೆಗೂ ರಾಮನಗರ ಪುರ ಠಾಣೆ ಪೊಲೀಸರು (Ramanagara Police) ಕೋಳ ತೊಡಿಸಿದ್ದಾರೆ (Arrest). ಅಂದಹಾಗೆ ಆತನ ಹೆಸರು ಮಹಮದ್ ದಸ್ತಗಿರ್ (43). ಮೂಲತಃ ಮೈಸೂರು ಜಿಲ್ಲೆಯವನಾದ ಈತ, ಸದ್ಯ ಬೆಂಗಳೂರಿನ ಕೆಂಗೇರಿ ಬಳಿ ವಾಸವಾಗಿದ್ದಾನೆ. ಆದರೆ ಈತನ ಹಿಸ್ಟರಿಯನ್ನ ಕೇಳಿದ್ರೆ ನೀವು ಸಹಾ ಬೆಚ್ಚಿ ಬೀಳುತ್ತಿರಾ.

ಬೆಳಗಿನ ಸಮಯದಲ್ಲಿ ಹಣ್ಣಿನ ವ್ಯಾಪಾರ ಮಾಡುವ ಈತ, ರಾತ್ರಿ ವೇಳೆ ಮನೆಯ ಮುಂದೆ ನಿಲ್ಲಿಸಿದ ಆಟೋಗಳನ್ನ ಅಬೇಸ್ ಮಾಡಿ ಸಿಕ್ಕ ಸಿಕ್ಕ ಬೆಲೆಗೆ ಮಾರಾಟ ಮಾಡುವುದೇ ಈತನ ಕಾಯಕವಾಗಿತ್ತು. ಇದುವರೆಗೂ 14 ಆಟೋಗಳನ್ನ ಕಳ್ಳತನ ಮಾಡಿ ಇದೀಗ ಪೊಲೀಸರ ಕೈಗೆ ತಗಲಾಕಿಕೊಂಡಿದ್ದಾನೆ.

ಕಳೆದ ತಿಂಗಳು ರಾಮನಗರ ಟಿಪ್ಪು ನಗರದಲ್ಲಿ ಸಮದ್ ಎಂಬುವವರು ತಮ್ಮ ಮನೆಯ ಮುಂದೆ ಆಟೋ ನಿಲ್ಲಿಸಿದ್ದರು. ಆದರದು ರಾತ್ರೋರಾತ್ರಿ ಕಳ್ಳತನವಾಗಿತ್ತು. ಅದೇ ರೀತಿ ಇನ್ನೂ ಹಲವು ಆಟೋಗಳು ಕೂಡ ರಾಮನಗರದಲ್ಲಿ ಕಳ್ಳತನ ಆಗಲು ಶುರುವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಮಹಮದ್ ದಸ್ತಗಿರ್ ನನ್ನ ಬಂಧಿಸಿ 14 ಆಟೋಗಳನ್ನ ವಶಕ್ಕೆ ಪಡೆದಿದ್ದಾರೆ.

ಅಂದಹಾಗೆ ಬೆಂಗಳೂರಿನ ಕೆಂಗೇರಿ ಬಳಿ ವಾಸವಾಗಿದ್ದ ಮಹಮದ್ ದಸ್ತಗಿರ್, ಸದ್ಯ ಹಣ್ಣಿನ ವ್ಯಾಪಾರ ಮಾಡುತ್ತಿದ್ದ. ಆದರೆ ರಾತ್ರಿ ವೇಳೆ ಆಟೋಗಳನ್ನ ಕಳ್ಳತನ ಮಾಡುವುದನ್ನ ಕಾಯಕ ಮಾಡಿಕೊಂಡಿದ್ದ. ಈ ಹಿಂದೆ ಆಟೋ ಚಾಲಕನಾಗಿದ್ದ ಈತನಿಗೆ, ಯಾವ ರೀತಿ ಆಟೋಗಳನ್ನ ನಕಲಿ ಕೀ ಬಳಸಿ ತೆಗೆದುಕೊಂಡು ಹೋಗಬೇಕು ಎಂಬುದು ಚೆನ್ನಾಗಿ ಗೊತ್ತಿತ್ತು.

ಹೀಗಾಗಿ ಸುಲಭವಾಗಿ ಆಟೋಗಳನ್ನ ಕಳ್ಳತನ ಮಾಡಿಕೊಂಡು ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ 8 ರಿಂದ 15 ಸಾವಿರಗಳಿಗೆ ಮಾರಾಟ ಮಾಡುತ್ತಿದ್ದ. ಅಲ್ಲೂ ಕೂಡ ಮೊದಲು ಹಣವನ್ನು ಪಡೆದು ನಂತರ ಆಟೋಗಳ ಡಾಕ್ಯುಮೆಂಟ್ಸ್ ಸಮೇತ ಕೊಡುವುದಾಗಿ ಹೇಳಿ ಯಮಾರಿಸಿಬಿಡುತ್ತಿದ್ದ. ಅದೇ ರೀತಿ ಬೆಂಗಳೂರು, ರಾಮನಗರ, ಚನ್ನಪಟ್ಟಣ ನಗರಗಳಲ್ಲಿ 14 ಆಟೋಗಳನ್ನ ಕಳ್ಳತನ ಮಾಡಿ ಮಾರಾಟ ಮಾಡಿದ್ದಾನೆ ಎಂದು ಮಾಹಿತಿ ನೀಡಿದವರು ರಾಮನಗರ ಎಸ್ ಪಿ ಸಂತೋಷ್ ಬಾಬು ಕೆ.

ಒಟ್ಟಾರೆ ಆಟೋ ಚಾಲಕರ ನಿದ್ರೆಗೆಡಿಸಿದ್ದ ಖತರ್ನಾಕ್ ಆಸಾಮಿಯನ್ನು ಕೊನೆಗೂ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಆಟೋ ಚಾಲಕರು ಈ ಮೂಲಕ ನಿಟ್ಟುಸಿರು ಬಿಟ್ಟಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ 9, ರಾಮನಗರ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?