AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು

ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು
ಕೊಪ್ಪಳದಲ್ಲಿ ಆಟೋ ಚಕ್ರಗಳ ಕಳ್ಳತನ
ಆಯೇಷಾ ಬಾನು
|

Updated on:Dec 01, 2020 | 11:26 AM

Share

ಕೊಪ್ಪಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳ್ಳರು ಕೈಚಳಕ ತೋರಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಆಟೋಗಳ ಚಕ್ರವನ್ನು ಖದೀಮರು ಕದ್ದಿರುವ ಘಟನೆ ನಗರದ 15 ನೇ ವಾರ್ಡ್​ನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳಿನಿಂದ ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ ಆಟೋಗಳ ಮೇಲೆ ಕಣ್ಣು ಹಾಕಿದ್ದಾರೆ. ಕತ್ತಲಾಗುತ್ತಿದ್ದಂತೆ ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ. ಕಳ್ಳರು ಯಾವುದೇ ಅನುಮಾನ ಬರದಂತೆ ಕಳ್ಳತನ ಮಾಡ್ತಿದ್ದಾರೆ. ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಸಾಲ ಮಾಡಿ ಮೂರು ಮಕ್ಕಳಿಗೆ ಆಟೋ ಕೊಡಿಸಿದ್ವಿ. ಒಂದು ಚಕ್ರಕ್ಕೆ ₹ 5000 ಹಾಕಬೇಕು, ಚಕ್ರದ ಜೊತೆಗೆ ಹಾರ್ನ್ ಕೂಡಾ ಕದ್ದೊಯ್ದಿದ್ದಾರೆ. ದುಡಿಮೆ‌ ಇಲ್ಲ ನಾವೇನ್ ಮಾಡೋಣ ಸ್ವಾಮಿ ಎಂದು ಮಕ್ಕಳಿಗೆ ಆಟೋ ಕೊಡಿಸಿದ್ದ ತಾಯಿ ಕಣ್ಣೀರು ಹಾಕಿದ್ದಾರೆ. ವಿಪರ್ಯಾಸವೆಂದ್ರೆ ಆಟೋ ಚಕ್ರಗಳು ಕಳ್ಳತನವಾದ್ರೂ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

Published On - 10:41 am, Tue, 1 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್