AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು

ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು
ಕೊಪ್ಪಳದಲ್ಲಿ ಆಟೋ ಚಕ್ರಗಳ ಕಳ್ಳತನ
ಆಯೇಷಾ ಬಾನು
|

Updated on:Dec 01, 2020 | 11:26 AM

Share

ಕೊಪ್ಪಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳ್ಳರು ಕೈಚಳಕ ತೋರಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಆಟೋಗಳ ಚಕ್ರವನ್ನು ಖದೀಮರು ಕದ್ದಿರುವ ಘಟನೆ ನಗರದ 15 ನೇ ವಾರ್ಡ್​ನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳಿನಿಂದ ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ ಆಟೋಗಳ ಮೇಲೆ ಕಣ್ಣು ಹಾಕಿದ್ದಾರೆ. ಕತ್ತಲಾಗುತ್ತಿದ್ದಂತೆ ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ. ಕಳ್ಳರು ಯಾವುದೇ ಅನುಮಾನ ಬರದಂತೆ ಕಳ್ಳತನ ಮಾಡ್ತಿದ್ದಾರೆ. ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಸಾಲ ಮಾಡಿ ಮೂರು ಮಕ್ಕಳಿಗೆ ಆಟೋ ಕೊಡಿಸಿದ್ವಿ. ಒಂದು ಚಕ್ರಕ್ಕೆ ₹ 5000 ಹಾಕಬೇಕು, ಚಕ್ರದ ಜೊತೆಗೆ ಹಾರ್ನ್ ಕೂಡಾ ಕದ್ದೊಯ್ದಿದ್ದಾರೆ. ದುಡಿಮೆ‌ ಇಲ್ಲ ನಾವೇನ್ ಮಾಡೋಣ ಸ್ವಾಮಿ ಎಂದು ಮಕ್ಕಳಿಗೆ ಆಟೋ ಕೊಡಿಸಿದ್ದ ತಾಯಿ ಕಣ್ಣೀರು ಹಾಕಿದ್ದಾರೆ. ವಿಪರ್ಯಾಸವೆಂದ್ರೆ ಆಟೋ ಚಕ್ರಗಳು ಕಳ್ಳತನವಾದ್ರೂ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

Published On - 10:41 am, Tue, 1 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ