AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ […]

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ
ಸಾಧು ಶ್ರೀನಾಥ್​
|

Updated on:Dec 21, 2019 | 2:08 PM

Share

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಿಳೆಗೆ ಹಲವಾರು ಸಲ ವಾರ್ನ್ ಸಹ ಮಾಡಿದ್ದನಂತೆ. ಕೊನೆಗೆ ಇದರಿಂದ ಸಿಟ್ಟಿಗೆದ್ದು ಎರಡೂವರೆ ತಿಂಗಳ ಹಿಂದೆಯೇ ಆ್ಯಸಿಡ್ ತಂದಿಟ್ಟುಕೊಂಡಿದ್ದಾನೆ. ಸ್ನೇಹಿತ ಕುಮಾರ್ ಜೊತೆ ಸೇರಿ ಮಹಿಳೆ ಮೇಲೆ ಆ್ಯಸಿಡ್‌ ದಾಳಿ ನಡೆಸಿ ಪರಾರಿಯಾಗಿದ್ದಾನೆ.

5-6 ತಿಂಗಳ ಹಿಂದೆ ಸಂತ್ರಸ್ತೆಗೆ ಅನುಮಾನಾಸ್ಪದವಾಗಿ ಆಕ್ಸಿಡೆಂಟ್ ಸಹ ಆಗಿತ್ತು. ಆದರೆ ಯಾವುದೇ ದೂರು ದಾಖಲಾಗಿರಲಿಲ್ಲ. ಆಕ್ಸಿಡೆಂಟ್ ಸಹ ಇದೇ ಆರೋಪಿ ಮಾಡಿಸಿದ್ದನಾ? ಎಂಬ ಬಗ್ಗೆ ತನಿಖೆಯ ನಂತರ ಗೊತ್ತಾಗಲಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:28 pm, Sat, 21 December 19

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ