AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದು ಅಪಘಾತ ಅಲ್ಲ, ಕೊಲೆ ಎಂಬ ಸತ್ಯಸಂಗತಿ ಬಯಲಾಗಿದೆ. ಆಸ್ತಿ ವಿಚಾರಕ್ಕೆ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!
ಕೊಲೆ ಆರೋಪಿಗಳಾದ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಮತ್ತು ಈತನ ಸಹೋದರ ಮೆಹಮೂದ್
TV9 Web
| Edited By: |

Updated on:Dec 19, 2023 | 8:40 AM

Share

ಬಾಗಲಕೋಟೆ, ಡಿ.19: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ (Murder) ಮಾಡಿದ್ದಾಗಿ ತಿಳಿದುಬಂದಿದೆ.

ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: 14 ವರ್ಷ 6 ಕೊಲೆ, ಗೃಹಿಣಿಯೊಬ್ಬಳ ದ್ವೇಷದ ನಿಜ ಕತೆ ನೆಟ್​ಫ್ಲಿಕ್ಸ್​ನಲ್ಲಿ

ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ.

ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 19 December 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!