AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದು ಅಪಘಾತ ಅಲ್ಲ, ಕೊಲೆ ಎಂಬ ಸತ್ಯಸಂಗತಿ ಬಯಲಾಗಿದೆ. ಆಸ್ತಿ ವಿಚಾರಕ್ಕೆ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!
ಕೊಲೆ ಆರೋಪಿಗಳಾದ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಮತ್ತು ಈತನ ಸಹೋದರ ಮೆಹಮೂದ್
TV9 Web
| Edited By: Rakesh Nayak Manchi|

Updated on:Dec 19, 2023 | 8:40 AM

Share

ಬಾಗಲಕೋಟೆ, ಡಿ.19: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ (Murder) ಮಾಡಿದ್ದಾಗಿ ತಿಳಿದುಬಂದಿದೆ.

ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: 14 ವರ್ಷ 6 ಕೊಲೆ, ಗೃಹಿಣಿಯೊಬ್ಬಳ ದ್ವೇಷದ ನಿಜ ಕತೆ ನೆಟ್​ಫ್ಲಿಕ್ಸ್​ನಲ್ಲಿ

ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ.

ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 19 December 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​