AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದು ಅಪಘಾತ ಅಲ್ಲ, ಕೊಲೆ ಎಂಬ ಸತ್ಯಸಂಗತಿ ಬಯಲಾಗಿದೆ. ಆಸ್ತಿ ವಿಚಾರಕ್ಕೆ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!
ಕೊಲೆ ಆರೋಪಿಗಳಾದ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಮತ್ತು ಈತನ ಸಹೋದರ ಮೆಹಮೂದ್
TV9 Web
| Edited By: |

Updated on:Dec 19, 2023 | 8:40 AM

Share

ಬಾಗಲಕೋಟೆ, ಡಿ.19: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ (Murder) ಮಾಡಿದ್ದಾಗಿ ತಿಳಿದುಬಂದಿದೆ.

ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: 14 ವರ್ಷ 6 ಕೊಲೆ, ಗೃಹಿಣಿಯೊಬ್ಬಳ ದ್ವೇಷದ ನಿಜ ಕತೆ ನೆಟ್​ಫ್ಲಿಕ್ಸ್​ನಲ್ಲಿ

ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ.

ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 19 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ