AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್

ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಗಳಾದ ತಂದೆ ಚೆನ್ನಪ್ಪ ಮತ್ತು ಮಗ ಚನ್ನಬಸಪ್ಪ ನಡುವೆ 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ಪದೆ ಪದೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ ರಮೇಶ್ ಮನಗೂಳಿ ಒಟ್ಟಿಗೆ ಸೇರಿ ಕೊಲೆ ಮಾಡಲು ಯೋಚನೆ ರೂಪಿಸಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ..

ಬಾಗಲಕೋಟೆ: ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Jan 27, 2024 | 9:45 AM

Share

ಬಾಗಲಕೋಟೆ, ಜನವರಿ 27: ಆಸ್ತಿಗಾಗಿ (Property) ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ‌ ಮಾಡಿಸಿದ‌ ಮಗ. ಮಾಂತೇಶ್ ಮರಡಿಮಠ ಕೊಲೆ‌ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ ಬಾಗಲಕೋಟೆ (Bagalkot) ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಸುತ್ತಿತ್ತು. 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಪದೆ ಪದೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ ರಮೇಶ್ ಮನಗೂಳಿ ಒಟ್ಟಿಗೆ ಸೇರಿ ಕೊಲೆ ಮಾಡಲು ಯೋಚನೆ ರೂಪಿಸಿದ್ದರು.

ನಂತರ ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ‌ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ. ಸುಫಾರಿ ಪಡೆದ ‌ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ‌ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ‌‌ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ಪ್ರಕರಣ ದಾಖಲಿಸಿಕೊಂಡರು.

ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದ ಆರೋಪಿಗಳಾದ ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

ಮೈಸೂರು: ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. 35 ವರ್ಷದ ವಿಜಯಲಕ್ಷ್ಮೀ ಮೃತ ದುರ್ದೈವಿ. ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿವೆ. ಎರಡು ಮುದ್ದಾದ ಮಕ್ಕಳಿವೆ. ಆದರೆ ವರದಕ್ಷಿಣೆಗಾಗಿ ಅತ್ತೆ, ಮಾವ, ಮೈದುನ ಮತ್ತು ಪತಿ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ