ಮತ್ತೆ ಜೈಲು ಸೇರಿದ ಕುಖ್ಯಾತ ಮನೆಗಳ್ಳ ಎಸ್ಕೇಪ್ ಕಾರ್ತಿಕ್

ಬೆಂಗಳೂರು: ಮನೆಗಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡು ಕುಖ್ಯಾತಿಯಾಗಿದ್ದ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಮತ್ತೆ ಜೈಲು ಸೇರಿದ್ದಾನೆ. ವಯಸ್ಸಿಗೂ ಮೀರಿ ಮನೆಗಳ್ಳತನ ಮಾಡಿರುವ ಕಾರ್ತಿಕ್(31) ಇತ್ತೀಚೆಗೆ 4 ಮನೆಗಳ್ಳತನ ಮಾಡಿದ್ದ. ಈ ಸಂಬಂಧ ಬಾಗಲೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಸ್ಕೇಪ್ ಕಾರ್ತಿಕ್​ನನ್ನು ಬಂಧಿಸಿದ್ದಾರೆ. ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡ್ತಿದ್ದ: ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡುವ ಕಾರ್ತಿಕ್, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಗೋವಾ, ಮುಂಬೈ ಸೇರಿದಂತೆ ಹಲವೆಡೆ ಮೋಜಿನ […]

ಮತ್ತೆ ಜೈಲು ಸೇರಿದ ಕುಖ್ಯಾತ ಮನೆಗಳ್ಳ ಎಸ್ಕೇಪ್ ಕಾರ್ತಿಕ್
ಸಾಧು ಶ್ರೀನಾಥ್​

Updated on: Feb 21, 2020 | 7:58 PM

ಬೆಂಗಳೂರು: ಮನೆಗಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡು ಕುಖ್ಯಾತಿಯಾಗಿದ್ದ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಮತ್ತೆ ಜೈಲು ಸೇರಿದ್ದಾನೆ. ವಯಸ್ಸಿಗೂ ಮೀರಿ ಮನೆಗಳ್ಳತನ ಮಾಡಿರುವ ಕಾರ್ತಿಕ್(31) ಇತ್ತೀಚೆಗೆ 4 ಮನೆಗಳ್ಳತನ ಮಾಡಿದ್ದ. ಈ ಸಂಬಂಧ ಬಾಗಲೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಸ್ಕೇಪ್ ಕಾರ್ತಿಕ್​ನನ್ನು ಬಂಧಿಸಿದ್ದಾರೆ.

ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡ್ತಿದ್ದ:
ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡುವ ಕಾರ್ತಿಕ್, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಗೋವಾ, ಮುಂಬೈ ಸೇರಿದಂತೆ ಹಲವೆಡೆ ಮೋಜಿನ ಜೀವನ ನಡೆಸುತ್ತಿದ್ದ. ಕಳೆದ ಕೆಲತಿಂಗಳಿನಿಂದ ಈಶಾನ್ಯ ವಿಭಾಗದಲ್ಲಿ ಆಸಾಮಿ ಆ್ಯಕ್ಟೀವ್ ಆಗಿದ್ದ. ಬಾಗಲೂರು ಹಾಗೂ ಅಮೃತಹಳ್ಳಿಯಲ್ಲಿ ನಾಲ್ಕು ಮನೆಗಳ್ಳತನ ನಡೆಸಿದ್ದ. ಹಾಗಾಗಿ ಕೃತ್ಯ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಜೈಲಿನಿಂದ ಮೊದಲು ಎಸ್ಕೇಪ್ ಆದ ಕುಖ್ಯಾತಿ:
ಬಂಧಿತ ಆರೋಪಿಯಿಂದ 18 ಲಕ್ಷ ಮೌಲ್ಯದ 400 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಮೊದಲು ಎಸ್ಕೇಪ್ ಆದ ಕುಖ್ಯಾತಿ ಇದೇ ಎಸ್ಕೇಪ್ ಕಾರ್ತಿಕ್​ಗಿದೆ. ಬರೋಬ್ಬರಿ 35ಕ್ಕೂ ಅಧಿಕ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ, 5ಕ್ಕೂ ಹೆಚ್ಚು ಬಾರಿ ಜೈಲು ಸೇರಿ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಬಿಡುಗಡೆಯಾದ ಬಳಿಕವೂ ಮತ್ತೆ ಮನೆಗಳ್ಳತನ ಮಾಡುತ್ತಿದ್ದ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us