AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಗಳು

ಸಾಮಾಜಿಕ ಹೋರಾಟಗಾರರಿಂದ ಲಂಚ ಪಡೆಯುತ್ತಿದ್ದಾಗ ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಬಳ್ಳಾರಿ: ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಗಳು
ಸಿಬಿಐ ಅಧಿಕಾರಿಗಳ ಕಾರು
TV9 Web
| Edited By: |

Updated on: Feb 09, 2023 | 5:26 PM

Share

ಬಳ್ಳಾರಿ: ಸಾಮಾಜಿಕ ಹೋರಾಟಗಾರರಿಂದ ಲಂಚ ಪಡೆಯುತ್ತಿದ್ದಾಗ ಕೇಂದ್ರ ಪುರಾತತ್ವ ಇಲಾಖೆಯ (Central Archaeological Survey Department) ಮೂವರು ಅಧಿಕಾರಿಗಳು ಸಿಬಿಐ (CBI) ಬಲೆಗೆ ಬಿದ್ದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಪ್ರಶಾಂತ್ ರೆಡ್ಡಿ, ಯೋಗೀಶ್, ಮೊಹಮದ್ ಗೌಸ್ ಬಂಧಿತ ಅಧಿಕಾರಿಗಳಾಗಿದ್ದಾರೆ. ಮನೆ ಕಟ್ಟಲು ಪುರಾತತ್ವ ಇಲಾಖೆಯಿಂದ NOC ನೀಡಲು‌ ಹಣ ಬೇಡಿಕೆ ಇಟ್ಟಿದ್ದ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಅದರಂತೆ ಖಾಸಗಿ ಹೋಟೆಲ್​ನಲ್ಲಿ ಲಂಚದ ಹಣವನ್ನು ಮುಂಗಡವಾಗಿ ನೀಡುತ್ತಿದ್ದಾಗ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

ರಾಜಶೇಖರ ಮುಲಾಲಿ ಎಂಬವರು ಬಳ್ಳಾರಿಯ ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ಕೋಟೆ ಪ್ರದೇಶದಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ. ಇದಕ್ಕಾಗಿ ಅವರು ಪುರಾತತ್ವ ಇಲಾಖೆಯಿಂದ NOC ನೀಡಲು‌ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಒಂದೂವರೆ ಲಕ್ಷ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ರಾಜಶೇಖರ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಅದರಂತೆ ಖಾಸಗಿ ಹೋಟೆಲ್​ನಲ್ಲಿ ಮುಂಗಡ 50 ಸಾವಿರ ರೂಪಾಯಿ ಹಣ ಪಡೆಯಲು ಬಂದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಳಿಕ ಬಂಧಿತರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Delhi Crime: ಮದುವೆ ಮನೆಯಲ್ಲಿ ಖುಷಿಯನ್ನು ಇಮ್ಮಡಿಗೊಳಿಸಲು ಬಂದ ಮ್ಯೂಸಿಕ್​ ಬ್ಯಾಂಡ್​ನವರಿಂದ ಕೊಲೆಯೇ ನಡೆದು ಹೋಯ್ತು

ಮಹಿಳೆ ಕೊಂದು ದೇಹದ ಮೇಲೆ ನೀರು ಹಾಕಿ ಬಾವಿಗೆ ಹಾರಿದ್ದಾಳೆ ಎಂದು ನಾಟಕ

ಗದಗ: ಗೃಹಿಣಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿರುವ ಸಾಸ್ವಿಹಳ್ಳಿ ಪಾರ್ಮ್ ನಡೆದಿದೆ. ರುಬಿನಾ ಕಣವಿ (28) ಮೃತ ಗೃಹಿಣಿಯಾಗಿದ್ದಾಳೆ. ಘಟನೆ ನಂತರ ಮೂರು ವರ್ಷದ ಮಗು ನಾಪತ್ತೆಯಾಗಿದೆ. ಇನ್ನು ರುಬಿನಾ ಸಾವಿಗೆ ಪತಿ ದಾವಲ್ ಸಾಬ್ ಮತ್ತು ಆತನ ಕುಟುಂಬಸ್ಥರೇ ಕಾರಣ ಎಂದು ಆರೋಪಿಸಿದ ಮೃತಳ ಕುಟುಂಬಸ್ಥರು, ರುಬಿನಾಳನ್ನು ಕೊಂದು ದೇಹದ ಮೇಲೆ ನೀರು ಹಾಕಿ ಬಾವಿಗೆ ಹಾರಿದ್ದಾಳೆ ಅಂತ ನಾಟವಾಡಿದ್ದಾನೆ ಎಂದಿದ್ದಾರೆ. ರುಬಿನಾಳೊಂದಿಗೆ ಪತಿ ಮತ್ತು ಆತನ ಕುಟುಂಬಸ್ಥರು ಸಾಕಷ್ಟು ಕಿರುಕುಳ ನೀಡುತ್ತಿದ್ದರು, ಜಗಳು ಕೂಡ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಜಾವೇದ್ ಕಣವಿ ಎನ್ನುವ 3 ವರ್ಷದ ಮಗುವನ್ನು ಪತಿ ಕುಟುಂಬಸ್ಥರು ಎಸ್ಕೇಪ್ ಮಾಡಿದ್ದಾರೆ ಎಂದು ಗೋಳಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್