AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಗಳು

ಸಾಮಾಜಿಕ ಹೋರಾಟಗಾರರಿಂದ ಲಂಚ ಪಡೆಯುತ್ತಿದ್ದಾಗ ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಬಳ್ಳಾರಿ: ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಗಳು
ಸಿಬಿಐ ಅಧಿಕಾರಿಗಳ ಕಾರು
TV9 Web
| Edited By: |

Updated on: Feb 09, 2023 | 5:26 PM

Share

ಬಳ್ಳಾರಿ: ಸಾಮಾಜಿಕ ಹೋರಾಟಗಾರರಿಂದ ಲಂಚ ಪಡೆಯುತ್ತಿದ್ದಾಗ ಕೇಂದ್ರ ಪುರಾತತ್ವ ಇಲಾಖೆಯ (Central Archaeological Survey Department) ಮೂವರು ಅಧಿಕಾರಿಗಳು ಸಿಬಿಐ (CBI) ಬಲೆಗೆ ಬಿದ್ದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಪ್ರಶಾಂತ್ ರೆಡ್ಡಿ, ಯೋಗೀಶ್, ಮೊಹಮದ್ ಗೌಸ್ ಬಂಧಿತ ಅಧಿಕಾರಿಗಳಾಗಿದ್ದಾರೆ. ಮನೆ ಕಟ್ಟಲು ಪುರಾತತ್ವ ಇಲಾಖೆಯಿಂದ NOC ನೀಡಲು‌ ಹಣ ಬೇಡಿಕೆ ಇಟ್ಟಿದ್ದ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಅದರಂತೆ ಖಾಸಗಿ ಹೋಟೆಲ್​ನಲ್ಲಿ ಲಂಚದ ಹಣವನ್ನು ಮುಂಗಡವಾಗಿ ನೀಡುತ್ತಿದ್ದಾಗ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

ರಾಜಶೇಖರ ಮುಲಾಲಿ ಎಂಬವರು ಬಳ್ಳಾರಿಯ ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ಕೋಟೆ ಪ್ರದೇಶದಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ. ಇದಕ್ಕಾಗಿ ಅವರು ಪುರಾತತ್ವ ಇಲಾಖೆಯಿಂದ NOC ನೀಡಲು‌ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಒಂದೂವರೆ ಲಕ್ಷ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ರಾಜಶೇಖರ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಅದರಂತೆ ಖಾಸಗಿ ಹೋಟೆಲ್​ನಲ್ಲಿ ಮುಂಗಡ 50 ಸಾವಿರ ರೂಪಾಯಿ ಹಣ ಪಡೆಯಲು ಬಂದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಳಿಕ ಬಂಧಿತರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Delhi Crime: ಮದುವೆ ಮನೆಯಲ್ಲಿ ಖುಷಿಯನ್ನು ಇಮ್ಮಡಿಗೊಳಿಸಲು ಬಂದ ಮ್ಯೂಸಿಕ್​ ಬ್ಯಾಂಡ್​ನವರಿಂದ ಕೊಲೆಯೇ ನಡೆದು ಹೋಯ್ತು

ಮಹಿಳೆ ಕೊಂದು ದೇಹದ ಮೇಲೆ ನೀರು ಹಾಕಿ ಬಾವಿಗೆ ಹಾರಿದ್ದಾಳೆ ಎಂದು ನಾಟಕ

ಗದಗ: ಗೃಹಿಣಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿರುವ ಸಾಸ್ವಿಹಳ್ಳಿ ಪಾರ್ಮ್ ನಡೆದಿದೆ. ರುಬಿನಾ ಕಣವಿ (28) ಮೃತ ಗೃಹಿಣಿಯಾಗಿದ್ದಾಳೆ. ಘಟನೆ ನಂತರ ಮೂರು ವರ್ಷದ ಮಗು ನಾಪತ್ತೆಯಾಗಿದೆ. ಇನ್ನು ರುಬಿನಾ ಸಾವಿಗೆ ಪತಿ ದಾವಲ್ ಸಾಬ್ ಮತ್ತು ಆತನ ಕುಟುಂಬಸ್ಥರೇ ಕಾರಣ ಎಂದು ಆರೋಪಿಸಿದ ಮೃತಳ ಕುಟುಂಬಸ್ಥರು, ರುಬಿನಾಳನ್ನು ಕೊಂದು ದೇಹದ ಮೇಲೆ ನೀರು ಹಾಕಿ ಬಾವಿಗೆ ಹಾರಿದ್ದಾಳೆ ಅಂತ ನಾಟವಾಡಿದ್ದಾನೆ ಎಂದಿದ್ದಾರೆ. ರುಬಿನಾಳೊಂದಿಗೆ ಪತಿ ಮತ್ತು ಆತನ ಕುಟುಂಬಸ್ಥರು ಸಾಕಷ್ಟು ಕಿರುಕುಳ ನೀಡುತ್ತಿದ್ದರು, ಜಗಳು ಕೂಡ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಜಾವೇದ್ ಕಣವಿ ಎನ್ನುವ 3 ವರ್ಷದ ಮಗುವನ್ನು ಪತಿ ಕುಟುಂಬಸ್ಥರು ಎಸ್ಕೇಪ್ ಮಾಡಿದ್ದಾರೆ ಎಂದು ಗೋಳಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​