AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಹೊಸ ವರ್ಷಕ್ಕೆ ಕೇಕ್ ತರಲು ಬಂದ ವ್ಯಕ್ತಿಯ ಚಾಕುವಿನಿಂದ ಇರಿದು ಕೊಲೆ, ಮತ್ತೊಬ್ಬ ಗಂಭೀರ

ಕೇಕ್ ತರಲು ಹೋಗಿದ್ದ ವೇಳೆ ಪಾರ್ಕಿಂಗ್ ಮಾಡಿದ್ದ ಬೈಕ್ ಗೆ ಕೊಲೆಯಾದವರ ಬೈಕ್ ತಗುಲಿದ ಪರಿಣಾಮ ಪರಸ್ಪರ ಕೈ ಕೈ ಮಿಲಾಯಿಸುವ ಮೂಲಕ ಜಗಳ ತೀವ್ರ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಆರೋಪಿ ರಾಜೇಶ್ ಎಂಬಾತನನ್ನು ಬಂಧಿಸಲಾಗಿದೆ.

ಬಳ್ಳಾರಿ: ಹೊಸ ವರ್ಷಕ್ಕೆ ಕೇಕ್ ತರಲು ಬಂದ ವ್ಯಕ್ತಿಯ ಚಾಕುವಿನಿಂದ ಇರಿದು ಕೊಲೆ, ಮತ್ತೊಬ್ಬ ಗಂಭೀರ
ಸಾಂದರ್ಭಿಕ ಚಿತ್ರ
ವಿನಾಯಕ ಬಡಿಗೇರ್​
| Edited By: |

Updated on:Jan 01, 2024 | 9:24 AM

Share

ಬಳ್ಳಾರಿ, ಜನವರಿ 1: ಹೊಸ ವರ್ಷದ ಸಂಭ್ರಮಾಚರಣೆಗೂ ಮುನ್ನಾ ದಿನದಂದೇ ಚಾಕು ಇರಿದು ಓರ್ವ ಕೊಲೆಯಾದ (Murder) ಘಟನೆ ಗಣಿನಾಡು ಬಳ್ಳಾರಿ (Ballari) ನಗರದ ವಡ್ಡರಬಂಡೆಯಲ್ಲಿ ನಡೆದಿದೆ. ಹೊಸ ವರ್ಷದ ಆಚರಣೆಗಾಗಿ ಕೇಕ್ ತರಲು ಸಹೋದರರಿಬ್ಬರು ಹೋಗಿದ್ದ ವೇಳೆ ಬೇಕರಿಯೊಂದರ ಬಳಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಆರ್.ಕೆ.ಕಾಲೋನಿಯ ನಿವಾಸಿ ಸೈಯದುಲ್ಲಾ (24) ಮೃತಪಟ್ಟಿದ್ದು, ಮತ್ತೋರ್ವ ಬಾಪೂಜಿ ನಗರದ ನಿವಾಸಿ ರಜಾಕ್ ವಲಿ (26) ತೀವ್ರ ಗಾಯಗೊಂಡಿದ್ದು, ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇಕ್ ತರಲು ಹೋಗಿದ್ದ ವೇಳೆ ಪಾರ್ಕಿಂಗ್ ಮಾಡಿದ್ದ ಬೈಕ್ ಗೆ ಕೊಲೆಯಾದವರ ಬೈಕ್ ತಗುಲಿದ ಪರಿಣಾಮ ಪರಸ್ಪರ ಕೈ ಕೈ ಮಿಲಾಯಿಸುವ ಮೂಲಕ ಜಗಳ ತೀವ್ರ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಆರೋಪಿ ರಾಜೇಶ್ ಎಂಬಾತನನ್ನು ಬಂಧಿಸಲಾಗಿದೆ.

ಇಡೀ ಬಳ್ಳಾರಿ ಜಿಲ್ಲೆ 2023 ಕ್ಕೆ ವಿಧಾಯ ಹೇಳಿ 2024 ರ ಹೊಸ ವರ್ಷವನ್ನ ಭರ ಮಾಡಿಕೊಳ್ಳಲು ಸಂತಸದಿಂದ ಕಾತುರ ದಿಂದ ಕಾಯುತ್ತಿರುವಾಗ, ಕೇವಲ ಬೈಕ್ ಪಾರ್ಕಿಂಗ್ ವಿಚಾರವಾಗಿ ಶುರುವಾದ ಗಲಾಟೆ ಓರ್ವನ ಜೀವ ಬಲಿ ಪಡೆದರೆ, ಇನ್ನೋರ್ವನನ್ನ ಸಾವು ಬದುಕಿನ ಮಧ್ಯ ಹೋರಾಡುವಂತೆ ಮಾಡಿಸಿದೆ. ಮೃತಪಟ್ಟ ಸೈದುಲ್ಲಗೆ ಹೊಟ್ಟೆ ಭಾಗಕ್ಕೆ ತೀವ್ರವಾಗಿ ಚಾಕು ಇರಿದ ಪರಿಣಾಮ ರಕ್ತ ಸ್ರಾವವಾಗಿ ಸಾವನ್ನಪ್ಪಿದ್ದರೆ, ಇನ್ನೊರ್ವ ರಜಾಕ ಹೊಟ್ಟೆ, ಬೆನ್ನು, ಕೈ ಭಾಗಕ್ಕೆ ಚಾಕು ಇರಿತವಾಗಿದ್ದು ಆತನು ಸಾವು ಬದುಕಿನ ಮದ್ಯ ಹೋರಾಟ ಮಾಡುತ್ತಿದ್ದಾರೆ. ಇಬ್ಬರೂ ದೂರದ ಸಹೋದರಾಗಿದ್ದು, ಯಾರ ತಂಟೆಗೆ ಹೋಗದೆ ತಮ್ಮ ಪಾಡಿಗೆ ತಾವು ಜೀವನ ಮಾಡುತ್ತಿದ್ದರು.

ಇದನ್ನೂ ಓದಿ: ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ

ಘಟನೆ ಸಂಬಂಧ ಬ್ರೂಸ್ ಪೇಟೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:57 am, Mon, 1 January 24

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ