AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಗ್ರಾಮಸ್ಥರೊಂದಿಗಿನ ವಾಗ್ವಾದದ ನಂತರ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಅಬಕಾರಿ ಪೊಲೀಸರ ವಾಹನ

ಬಳ್ಳಾರಿಯಲ್ಲಿ ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿರುವ ಮದ್ಯದ ಬಾಟಲ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, ಆರೋಪಿ ಸಹಿತ ದುಬಾರಿ ಬೆಲೆಯ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಗ್ರಾಮಸ್ಥರೊಂದಿಗಿನ ವಾಗ್ವಾದದ ನಂತರ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಅಬಕಾರಿ ಪೊಲೀಸರ ವಾಹನ
ಚಿಕ್ಕಬಳ್ಳಾಪುರದಲ್ಲಿ ಮೂರು ಬೈಕ್​ಗಳಿಗೆ ಡಿಕ್ಕಿ ಹೊಡೆದ ಅಬಕಾರಿ ಪೊಲೀಸರ ವಾಹನ
Rakesh Nayak Manchi
|

Updated on:Mar 28, 2023 | 9:58 PM

Share

ಚಿಕ್ಕಬಳ್ಳಾಪುರ: ಅಕ್ರಮ ಮದ್ಯ (Liquor ) ಸರಬರಾಜು ಪತ್ತೆಗೆ ಹೋದಾಗ ಗ್ರಾಮಸ್ಥರು ಹಾಗೂ ಅಬಕಾರಿ ಅಧಿಕಾರಿಗಳ ಮದ್ಯೆ ಮಾತಿನ ಚಕಾಮಕಿ ನಡೆದ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿ ಗ್ರಾಮದಲ್ಲಿ  ನಡೆದಿದೆ. ಗಲಾಟೆ ನಂತರ ಅಬಕಾರಿ ಸಿಬ್ಬಂದಿ ಅತಿ ವೇಗವಾಗಿ ಜೀಪು ಚಾಲಯಿಸಿಕೊಂಡು ಹೋಗಿದ್ದಾರೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮೂರು ಬೈಕ್​ಗಳಿಗೆ ಜೀಪು ಡಿಕ್ಕಿಯಾಗಿದ್ದು, ಬೈಕ್ ಸವಾರ ಮಂಜುನಾಥ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಇನ್ನಿಬ್ಬರು ಬೈಕ್ ಸವಾರರಿಗೆ ಗಾಯಗಳಾಗಿದ್ದು, ಗೌರಿಬಿದನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರ ಜೊತೆಯೂ ಗ್ರಾಮಸ್ಥರ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ಬಳ್ಳಾರಿ: ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ ಮದ್ಯ ಅಕ್ರಮವಾಗಿ ಸಂಗ್ರಹ, 4 ಲಕ್ಷ ಮೌಲ್ಯದ ಮದ್ಯ ಜಪ್ತಿ!

ಬಳ್ಳಾರಿ: ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿರುವ ಮದ್ಯದ ಬಾಟಲ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ವ್ಯಕ್ತಿಯ ಮೇಲೆ ಜಿಲ್ಲಾ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ ದುಬಾರಿ ಬೆಲೆಯ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ನಗರದ ವಿಮ್ಸ್‌ ಹಿಂಭಾಗದಲ್ಲಿನ ವಿದ್ಯಾನಗರದ ನಿವಾಸಿ ಈಶ್ವರ ರವಿಚಂದ್ರ ಮನೆ ಮೇಲೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ ದುಬಾರಿ ಬೆಲೆಯ ಒಟ್ಟು 4.01 ಲಕ್ಷ ರೂಪಾಯಿ ಮೌಲ್ಯದ 142 ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಅಬಕಾರಿ ನಿರೀಕ್ಷ ಕರಾದ ಜ್ಯೋತಿಬಾಯಿ, ಉಪನಿರೀಕ್ಷ ಕ ರುದ್ರೇಗೌಡ, ಗೌಡಪ್ಪ, ಪೇದೆಗಳಾದ ಖಾಜಾ ಹುಸೇನ್‌ ಪೀರನ್‌, ಸದ್ದಾಂ ಹುಸೇನ್‌, ವಾಹನ ಚಾಲಕಿ ಗಾಯತ್ರಿ ಇದ್ದರು.

ರಾಜ್ಯಸ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Tue, 28 March 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?