AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ ನವೀನ್ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 15, 2023 | 10:32 AM

Share

ಕೊಪ್ಪಳ ಅ.14: ಬಳ್ಳಾರಿಯ (Ballari) ಖಾಸಗಿ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ (Koppal) ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ನವೀನ್ ಅತ್ಯಾಚಾರವೆಸಗಿದ ಆರೋಪಿ​. ಮೂವರನ್ನು ಬಳ್ಳಾರಿ ನಗರದ ಕೌಲ್ ಬಜಾರ್ ನಿವಾಸಿಗಳಾದ ನವೀನ್ ಕುಮಾರ್, ಮಹಮ್ಮದ್ ಸಾಕಿಬ್, ತನುಗೌಡ ಎಂದು ಗುರುತಿಸಲಾಗಿದ್ದು, ನಾಲ್ಕನೇ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಬಿಯರ್​ ಕುಡಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ಬಳ್ಳಾರಿಯ ಖಾಸಗಿ ಕಾಲೇಜೊಂದರಲ್ಲಿ ಬಿ. ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದಾಳೆ. ನಿನ್ನೆ (ಅ.14) ರಂದು ಪರೀಕ್ಷೆ ಬರೆಯುತ್ತಿದ್ದ ಯುವತಿಯನ್ನು ‘ನಿಮ್ಮ ಅಣ್ಣ ಬಂದಿದ್ದಾನೆ’ ಎಂದು ಸುಳ್ಳು ಹೇಳಿ ತರಗತಿಯಲ್ಲಿದ್ದ ಆಕೆಯನ್ನು ಆಯಾಳಿಂದ ಹೊರಗಡೆ ಕರೆಸಿಕೊಂಡ ಪರಿಚಿತ ಯುವಕ, ಬಳಿಕ ತನ್ನ ಮೂವರು ಸ್ನೇಹಿತರೊಟ್ಟಿಗೆ ಸೇರಿ ಆಕೆಯನ್ನು ಆಟೋದಲ್ಲಿ ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ

ಯುವತಿಯನ್ನು ಗಂಗಾವತಿ ತಾಲೂಕು ಸಣಾಪುರ ಬಳಿಯ ಖಾಸಗಿ ಹೋಟೆಲ್‌ವೊಂದರಲ್ಲಿ ಕೂಡಿಹಾಕಿ ಆಕೆಗೆ ಬಿಯರ್​ ಕುಡಿಸಿದ್ದಾರೆ. ಬಳಕಿ ಆರೋಪಿ ನವೀನ್​ ಅತ್ಯಾಚಾರ ಎಸಗಿದ್ದಾನೆ. ಉಳಿದ ಮೂವರು ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ. ಈ ಕುರಿತು ಸಂತ್ರಸ್ತೆ ನಗರದ ಮಹಿಳಾ ಠಾಣೆಯಲ್ಲಿ ನೀಡಿದ ದೂರು ನೀಡಿದ್ದಳು.

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ ನವೀನ್ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 am, Sun, 15 October 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ