AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ ನವೀನ್ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Oct 15, 2023 | 10:32 AM

Share

ಕೊಪ್ಪಳ ಅ.14: ಬಳ್ಳಾರಿಯ (Ballari) ಖಾಸಗಿ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ (Koppal) ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ನವೀನ್ ಅತ್ಯಾಚಾರವೆಸಗಿದ ಆರೋಪಿ​. ಮೂವರನ್ನು ಬಳ್ಳಾರಿ ನಗರದ ಕೌಲ್ ಬಜಾರ್ ನಿವಾಸಿಗಳಾದ ನವೀನ್ ಕುಮಾರ್, ಮಹಮ್ಮದ್ ಸಾಕಿಬ್, ತನುಗೌಡ ಎಂದು ಗುರುತಿಸಲಾಗಿದ್ದು, ನಾಲ್ಕನೇ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಬಿಯರ್​ ಕುಡಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ಬಳ್ಳಾರಿಯ ಖಾಸಗಿ ಕಾಲೇಜೊಂದರಲ್ಲಿ ಬಿ. ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದಾಳೆ. ನಿನ್ನೆ (ಅ.14) ರಂದು ಪರೀಕ್ಷೆ ಬರೆಯುತ್ತಿದ್ದ ಯುವತಿಯನ್ನು ‘ನಿಮ್ಮ ಅಣ್ಣ ಬಂದಿದ್ದಾನೆ’ ಎಂದು ಸುಳ್ಳು ಹೇಳಿ ತರಗತಿಯಲ್ಲಿದ್ದ ಆಕೆಯನ್ನು ಆಯಾಳಿಂದ ಹೊರಗಡೆ ಕರೆಸಿಕೊಂಡ ಪರಿಚಿತ ಯುವಕ, ಬಳಿಕ ತನ್ನ ಮೂವರು ಸ್ನೇಹಿತರೊಟ್ಟಿಗೆ ಸೇರಿ ಆಕೆಯನ್ನು ಆಟೋದಲ್ಲಿ ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ

ಯುವತಿಯನ್ನು ಗಂಗಾವತಿ ತಾಲೂಕು ಸಣಾಪುರ ಬಳಿಯ ಖಾಸಗಿ ಹೋಟೆಲ್‌ವೊಂದರಲ್ಲಿ ಕೂಡಿಹಾಕಿ ಆಕೆಗೆ ಬಿಯರ್​ ಕುಡಿಸಿದ್ದಾರೆ. ಬಳಕಿ ಆರೋಪಿ ನವೀನ್​ ಅತ್ಯಾಚಾರ ಎಸಗಿದ್ದಾನೆ. ಉಳಿದ ಮೂವರು ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ. ಈ ಕುರಿತು ಸಂತ್ರಸ್ತೆ ನಗರದ ಮಹಿಳಾ ಠಾಣೆಯಲ್ಲಿ ನೀಡಿದ ದೂರು ನೀಡಿದ್ದಳು.

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ ನವೀನ್ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 am, Sun, 15 October 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ