ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ […]

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್
ಸಾಧು ಶ್ರೀನಾಥ್​

Updated on: Oct 26, 2019 | 4:18 PM

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಆರೋಪಿ ಮೊಬೈಲ್​ನಲ್ಲಿ ಯುವತಿಯರ ಫೋಟೋ, ವಿಡಿಯೋ ಲಭ್ಯವಾಗಿದೆ. ಆರೋಪಿ ಅರುಣ್ ಕುಮಾರ್ ರಕ್ಷಣೆಗೆ ಹಾಗೂ ಪ್ರಕರಣವನ್ನು ಹಾದಿ ತಪ್ಪಿಸಲು ಕೆಲ ಪ್ರಭಾವಿ ನಾಯಕರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

Published On - 3:42 pm, Sat, 26 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us