AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಹಿಂದೂ ಯುವಕನಿಗೆ ‘ಕತ್ನಾ’ ಮಾಡಿಸಿ ಮತಾಂತರ: ತಮಿಳುನಾಡಿನಲ್ಲಿ ಸಿಕ್ಕ ಪ್ರಮುಖ ಆರೋಪಿ

ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಆರೋಪಿಗಳನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಡ್ಯ ಹಿಂದೂ ಯುವಕನಿಗೆ ‘ಕತ್ನಾ’ ಮಾಡಿಸಿ ಮತಾಂತರ: ತಮಿಳುನಾಡಿನಲ್ಲಿ ಸಿಕ್ಕ ಪ್ರಮುಖ ಆರೋಪಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 13, 2022 | 2:11 PM

Share

ಬೆಂಗಳೂರು: ಬೆಂಗಳೂರಿನಲ್ಲಿ‌ ಮಂಡ್ಯ ಮೂಲದ ಯುವಕನ‌ ಮತಾಂತರ ಹಾಗು ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.

ನಿನ್ನೆ ರಾತ್ರಿ(ಅ.12) ನಯಾಜ್ ಪಾಷಾ, ಹಾಜಿ ಸಾಬ್ ಬಂಧಿಸಲಾಗಿತ್ತು ಇಂದು (ಅಕ್ಟೋಬರ್. 13) ತಮಿಳುನಾಡಿನಲ್ಲಿ ಮಾಜಿ ಕಾರ್ಪೊರೇಟರ್ ಅನ್ಸರ್ ಪಾಷಾನನ್ನು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಈ ಹಿಂದೆ ಅತಾವುರ್ ರೆಹಮಾನ್, ಶೊಯೇಬ್​ನನ್ನ ಬಂಧಿಸಿದ್ದರು. ಈ ಮೂಲಕ ಇದುವರೆಗೆ ಐವರ ಬಂಧನವಾದಂತಾಗಿದೆ.

ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿ ಮತಾಂತರ ಯತ್ನ ಪ್ರಕರಣ ಬೆಂಗಳೂರಿಗೆ ವರ್ಗಾವಣೆ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕನ ಶ್ರೀಧರ್ @ಸಲ್ಮಾನ್ ಎಂಬಾತನನ್ನ ಮತಾಂತರ ಹಾಗೂ ಕತ್ನಾ ಮಾಡಲಾಗಿತ್ತು. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿಗೆ ಅತಾವುರ್ ರೆಹಮಾನ್@ಲಿಂಗರಾಜು ಹಾಗು ಶೊಯೇಬ್ ಎಂಬುವವರನ್ನ ಬಂಧಿಸಲಾಗಿತ್ತು.

ಏನಿದು ಪ್ರಕರಣ? ಶ್ರೀಧರ್ ತನಗೆ ಹಣಕಾಸಿನ ತೊಂದರೆ ಎದುರಾಗಿದೆ ಎಂಬ ಬಗ್ಗೆ ಎ ಒನ್ ಆರೋಪಿ ಅತ್ತಾವರ ರೆಹಮಾನ್ ಬಳಿ ಹೇಳಿಕೊಂಡಿದ್ದ. ನಂತರ ಆತ ಶ್ರೀಧರ್ ಎಸ್​ಸಿ ಎಸ್​ಟಿ ಎಂದು ತಿಳಿದು ಎ2 ಆರೋಪಿ ಅಜಿಸಾಬ್ ಎಂಬಾತನನ್ನ ಬನಶಂಕರಿಯ ಮಸೀದಿಗೆ ಕರೆದುಕೊಂಡು ಹೋಗಿ ಪರಿಚಯಿಸಿದ್ದ. ಈ ವೇಳೆ ಅಜಿಸಾಬ್ ಹಿಂದೂ ದೇವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಇವರನ್ನೆಲ್ಲಾ ದೇವರಾ? ಎಂದು ದೇವರನ್ನು ನಿಂದಿಸಿದ್ದನಂತೆ. ನಂತರ ಇಸ್ಲಾಂ ಧರ್ಮದ ಬಗ್ಗೆ ಭೋದನೆ ಮಾಡಿ ಆ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿದ್ದನಂತೆ. ಬಳಿಕ ಅವನ ಮೊಬೈಲನ್ನ ಪಡೆದು ಒಂದು ವಾರಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿದ್ದರಂತೆ. ಇದೆಲ್ಲ ಆದ ಮೇಲೆ ಬಲವಂತವಾಗಿ ಕತ್ನಾ ಮಾಡಿಸಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸದ್ಯ ಬನಶಂಕರಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್