ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಕ್ಯಾಂಪಸ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶೋಧನಾ ವಿದ್ಯಾರ್ಥಿ(Student) ಐಐಎಸ್​ಸಿ ಕ್ಯಾಂಪಸ್​ನ ಕಟ್ಟಡದಿಂದ ಜಿಗಿದು ಇಂದು(ಡಿ.01) ಬೆಳಗಿನ ಜಾವ 7:10ರ ಸಂಧರ್ಭದಲ್ಲಿ ಆತ್ಮಹತ್ಯೆ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಕ್ಯಾಂಪಸ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 01, 2023 | 8:40 PM

ಬೆಂಗಳೂರು, ಡಿ.01: ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ(Student) ಐಐಎಸ್​ಸಿ ಕ್ಯಾಂಪಸ್​ನ ಕಟ್ಟಡದಿಂದ ಜಿಗಿದು ಇಂದು(ಡಿ.01) ಬೆಳಗಿನ ಜಾವ 7:10ರ ಸಂಧರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 2022ರ ಬ್ಯಾಚ್​ನ ಡೈಮಂಡ್ ಖುಷ್ವಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇನ್ನು ಕೆಮಿಕಲ್ ಸೈನ್ಸ್ ವಿಭಾಗದಲ್ಲಿ ಸಂಶೋಧನೆ ಮಾಡುತ್ತಿದ್ದರು. ಆದರೆ, ದಿಢೀರ್​ ಖುಷ್ವಾ ಅವರು ಆತ್ಮಹತ್ಯೆಗೆ ಶರಣಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

ಹುಬ್ಬಳ್ಳಿ : ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ನಗರದಲ್ಲಿನ ಕಾರವಾರ ರಸ್ತೆಯ ಮಾರ್ಗದಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಅಲೆನ್​​ ವಿನೋದ್​​​ ಭಸ್ನೆ(24) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಉಪನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು,  ಮೃತದೇಹವನ್ನು ಪೊಲೀಸರು, ಕಿಮ್ಸ್​​​ ಶವಗಾರಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ:ಕಾರಿನಲ್ಲಿ ವೈದ್ಯನ ಶವ ಪತ್ತೆ: ಭ್ರೂಣ ಹತ್ಯೆ ಕೇಸ್​ನಲ್ಲಿ ಹೆಸರು ಕೇಳಿಬಂದ ಹಿನ್ನೆಲೆ ಆತ್ಮಹತ್ಯೆ ಶಂಕೆ

ಕಾರಿನಲ್ಲಿ ವೈದ್ಯನ ಶವ ಪತ್ತೆ

ಮಂಡ್ಯ: ತಾಲೂಕಿನ ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಡಾ.ಸತೀಶ್ ಎಂಬುವವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಡಾ.ಸತೀಶ್(47)  ಮೃತ ರ್ದುದೈವಿ. ಹಲವು  ವರ್ಷಗಳಿಂದ ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಡಾ.ಸತೀಶ್ ಅವರ ಹೆಸರು, ಇತ್ತೀಚಿಗೆ ಭ್ರೂಣ ಹತ್ಯೆ ಕೇಸ್​ನಲ್ಲಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಡಾ.ಸತೀಶ್​ನನ್ನು ವಿಚಾರಣೆಗೆ ಕರೆದಿದ್ದರು ಎನ್ನಲಾಗಿದೆ. ಹೀಗಾಗಿ ಕಾರಿನಲ್ಲಿಯೇ ಇಂಜೆಕ್ಷನ್​ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 pm, Fri, 1 December 23

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us