AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕನಗರ, ಕಬ್ಬನ್ ಪಾರ್ಕ್ ಠಾಣೆ​ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು ನಗರದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 11ಮಂದಿ ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲದ ಮಾದಕ ವಸ್ತುಗಳನ್ನು ಮತ್ತು ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಅಶೋಕನಗರ, ಕಬ್ಬನ್ ಪಾರ್ಕ್ ಠಾಣೆ​ ಪೊಲೀಸರ ಭರ್ಜರಿ ಕಾರ್ಯಾಚರಣೆ
ಡ್ರಗ್ಸ್​ ಮಾರಾಟ ಮಾಡುತ್ತಿದ್ದ 11 ಮಂದಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು
TV9 Web
| Edited By: Rakesh Nayak Manchi|

Updated on:Oct 30, 2022 | 2:46 PM

Share

ಬೆಂಗಳೂರು: ನಗರದಲ್ಲಿ ಮಾದಕವಸ್ತು ಮಾರಾಟ, ಖರೀದಿ ವಿರುದ್ಧ ಸಮರ ಸಾರಿರುವ ಪೊಲೀಸರು ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಇದೀಗ ಅಶೋಕನಗರ ಮತ್ತು ಕಬ್ಬನ್ ಪಾರ್ಕ್ ಠಾಣೆ​ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಡಾನ್​, ಯೆಮನ್​, ನೈಜೀರಿಯಾ, ಕೇರಳ ಮೂಲದ 11 ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲ್ಯದ ಮಾದಕವಸ್ತು, ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮೊಹ್ಮದ್ ಹರೂನ್​, ಮೊಹ್ಮದ್ ಒರುವಿಲ್, ಇಲಿಯಾಸ್, ಅಬ್ದುರ್ ಅಬು, ಮೊಹ್ಮದ್ ಮೂಸಾ, ಬಿಲಾಲ್​, ಜಾನ್ ಪೌಲ್, ಜೋಸೆಫ್​ ಬೆಂಜಮಿನ್, ಇಸ್ಮಾಯಿಲ್ ಸೇರಿ 11 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವೀಸಾ ಅವಧಿ ಮುಗಿದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ನಗರದಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.

ವಿವಿಧ ಕಾರಣಗಳಿಗಾಗಿ ವೀಸಾ ಪಡೆದು ಭಾರಕ್ಕೆ ಬಂದಿದ್ದ ವ್ಯಕ್ತಿಗಳು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದರು. ಈ ವಿಚಾರ ತಿಳಿದ ಬೆಂಗಳೂರು ಕೇಂದ್ರ ವಿಭಾಗದ ಅಶೋಕನಗರ, ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅದರಂತೆ ಒಟ್ಟು 11 ಮಂದಿಯನ್ನು ಬಂಧಿಸಿದ ಪೊಲೀಸರು, ಒಟ್ಟು 1ಕೋಟಿಯ 9ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾ, ಎಂಡಿಎಂಎ, 2 ಕಾರುಗಳು, ಮೊಬೈಲ್ ಫೋನ್​ಗಳು ಮತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ನೆಲಮಂಗಲ: ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಇದೀಗ ಸಾವನ್ನಪ್ಪಿದ್ದಾರೆ. ಅ.12 ರಂದು ಬೈಕ್ ಮೂಲಕ ಬರುತ್ತಿದ್ದ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಕುಕ್ಕನಹಳ್ಳಿ ನಿವಾಸಿ ನರಸಿಂಹ ಮೂರ್ತಿ (55) ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೇಸರಘಟ್ಟದ ದೇವೇಗೌಡನಗರದ ಬಳಿ ಬರುತ್ತಿದ್ದಾಗ ಹಳೇ ಆಲದಮರ ಬಿದ್ದಿದೆ. ಘಟನೆಯಲ್ಲಿ ನರಸಿಂಹ ಮೂರ್ತಿಯವರ ತಲೆ, ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈಗ ಅವರು ಚಿಕಿತ್ಸೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Sun, 30 October 22

Follow Us
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ