AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ

ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ
ಸಾಂರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 16, 2023 | 7:53 AM

Share

ಬೆಂಗಳೂರು: ಆನ್‌ಲೈನ್ ಪೇಮೆಂಟ್​ (Online Payment) ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ (Cash Back) ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ (Account) ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ಯಾರುಲ್​ ಷಾ ತಮ್ಮ ಹೊಟೇಲ್​ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಈ ವೇಳೆ ಹೋಟೆಲ್​ಗೆ ಬಂದ ಇಬ್ಬರು ಅಪರಿಚಿತರು ತಾವು ಬ್ಯಾಂಕ್ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ.

ನಂತರ ಪ್ಯಾರುಲ್​ ಷಾ ಅವರಿಗೆ ನೀವು ಈ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ಪ್ರತಿದಿನ 300 ರೂ. ಕ್ಯಾಶ್​ಬ್ಯಾಕ್​​ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಉತ್ಸುಕರಾದ ಪ್ಯಾರುಲ್​ ಷಾ ಅವರು ಅಪರಿಚಿತ ವ್ಯಕ್ತಿಗೆ ತಮ್ಮ ಮೊಬೈಲ್​ ನೀಡಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರಗಳನ್ನೂ ಸಹ ಅವರಿಗೆ ಹೇಳಿದ್ದಾರೆ ನಂತರ ಈ ಇಬ್ಬರು ಕೆಲ ಕಾಲ ಮೊಬೈಲ್‌ ಬಳಸಿ ಆ್ಯಪ್​ ಇನ್​ಸ್ಟಾಲ್​ ಆಗಿದೆ ಎಂದು ಹೇಳಿ ಮೊಬೈಲ್​ ಮರುಕಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ನಂತರ ಪಾರುಲ್​ ಷಾ ಅವರು ತಮ್ಮ ಬ್ಯಾಂಕ್​ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಖಾತೆಯಿಂದ 52 ಸಾವಿರ ರೂ. ವರ್ಗಾವಣೆಗೊಂಡಿರುವುದು ತಿಳಿದಿದೆ. ಇದರಿಂದ ಗಾಬರಿಗೊಂಡ ಮಾಣಿಕ್​ ಷಾ ಅವರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 16 August 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?