AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ

ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ
ಸಾಂರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 16, 2023 | 7:53 AM

Share

ಬೆಂಗಳೂರು: ಆನ್‌ಲೈನ್ ಪೇಮೆಂಟ್​ (Online Payment) ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ (Cash Back) ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ (Account) ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ಯಾರುಲ್​ ಷಾ ತಮ್ಮ ಹೊಟೇಲ್​ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಈ ವೇಳೆ ಹೋಟೆಲ್​ಗೆ ಬಂದ ಇಬ್ಬರು ಅಪರಿಚಿತರು ತಾವು ಬ್ಯಾಂಕ್ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ.

ನಂತರ ಪ್ಯಾರುಲ್​ ಷಾ ಅವರಿಗೆ ನೀವು ಈ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ಪ್ರತಿದಿನ 300 ರೂ. ಕ್ಯಾಶ್​ಬ್ಯಾಕ್​​ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಉತ್ಸುಕರಾದ ಪ್ಯಾರುಲ್​ ಷಾ ಅವರು ಅಪರಿಚಿತ ವ್ಯಕ್ತಿಗೆ ತಮ್ಮ ಮೊಬೈಲ್​ ನೀಡಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರಗಳನ್ನೂ ಸಹ ಅವರಿಗೆ ಹೇಳಿದ್ದಾರೆ ನಂತರ ಈ ಇಬ್ಬರು ಕೆಲ ಕಾಲ ಮೊಬೈಲ್‌ ಬಳಸಿ ಆ್ಯಪ್​ ಇನ್​ಸ್ಟಾಲ್​ ಆಗಿದೆ ಎಂದು ಹೇಳಿ ಮೊಬೈಲ್​ ಮರುಕಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ನಂತರ ಪಾರುಲ್​ ಷಾ ಅವರು ತಮ್ಮ ಬ್ಯಾಂಕ್​ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಖಾತೆಯಿಂದ 52 ಸಾವಿರ ರೂ. ವರ್ಗಾವಣೆಗೊಂಡಿರುವುದು ತಿಳಿದಿದೆ. ಇದರಿಂದ ಗಾಬರಿಗೊಂಡ ಮಾಣಿಕ್​ ಷಾ ಅವರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 16 August 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ