AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ

ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ
ಸಾಂರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 16, 2023 | 7:53 AM

Share

ಬೆಂಗಳೂರು: ಆನ್‌ಲೈನ್ ಪೇಮೆಂಟ್​ (Online Payment) ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ (Cash Back) ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ (Account) ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ಯಾರುಲ್​ ಷಾ ತಮ್ಮ ಹೊಟೇಲ್​ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಈ ವೇಳೆ ಹೋಟೆಲ್​ಗೆ ಬಂದ ಇಬ್ಬರು ಅಪರಿಚಿತರು ತಾವು ಬ್ಯಾಂಕ್ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ.

ನಂತರ ಪ್ಯಾರುಲ್​ ಷಾ ಅವರಿಗೆ ನೀವು ಈ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ಪ್ರತಿದಿನ 300 ರೂ. ಕ್ಯಾಶ್​ಬ್ಯಾಕ್​​ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಉತ್ಸುಕರಾದ ಪ್ಯಾರುಲ್​ ಷಾ ಅವರು ಅಪರಿಚಿತ ವ್ಯಕ್ತಿಗೆ ತಮ್ಮ ಮೊಬೈಲ್​ ನೀಡಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರಗಳನ್ನೂ ಸಹ ಅವರಿಗೆ ಹೇಳಿದ್ದಾರೆ ನಂತರ ಈ ಇಬ್ಬರು ಕೆಲ ಕಾಲ ಮೊಬೈಲ್‌ ಬಳಸಿ ಆ್ಯಪ್​ ಇನ್​ಸ್ಟಾಲ್​ ಆಗಿದೆ ಎಂದು ಹೇಳಿ ಮೊಬೈಲ್​ ಮರುಕಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ನಂತರ ಪಾರುಲ್​ ಷಾ ಅವರು ತಮ್ಮ ಬ್ಯಾಂಕ್​ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಖಾತೆಯಿಂದ 52 ಸಾವಿರ ರೂ. ವರ್ಗಾವಣೆಗೊಂಡಿರುವುದು ತಿಳಿದಿದೆ. ಇದರಿಂದ ಗಾಬರಿಗೊಂಡ ಮಾಣಿಕ್​ ಷಾ ಅವರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 16 August 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!