AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ

ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ
ಸಾಂರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 16, 2023 | 7:53 AM

Share

ಬೆಂಗಳೂರು: ಆನ್‌ಲೈನ್ ಪೇಮೆಂಟ್​ (Online Payment) ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ (Cash Back) ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ (Account) ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ಯಾರುಲ್​ ಷಾ ತಮ್ಮ ಹೊಟೇಲ್​ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಈ ವೇಳೆ ಹೋಟೆಲ್​ಗೆ ಬಂದ ಇಬ್ಬರು ಅಪರಿಚಿತರು ತಾವು ಬ್ಯಾಂಕ್ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ.

ನಂತರ ಪ್ಯಾರುಲ್​ ಷಾ ಅವರಿಗೆ ನೀವು ಈ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ಪ್ರತಿದಿನ 300 ರೂ. ಕ್ಯಾಶ್​ಬ್ಯಾಕ್​​ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಉತ್ಸುಕರಾದ ಪ್ಯಾರುಲ್​ ಷಾ ಅವರು ಅಪರಿಚಿತ ವ್ಯಕ್ತಿಗೆ ತಮ್ಮ ಮೊಬೈಲ್​ ನೀಡಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರಗಳನ್ನೂ ಸಹ ಅವರಿಗೆ ಹೇಳಿದ್ದಾರೆ ನಂತರ ಈ ಇಬ್ಬರು ಕೆಲ ಕಾಲ ಮೊಬೈಲ್‌ ಬಳಸಿ ಆ್ಯಪ್​ ಇನ್​ಸ್ಟಾಲ್​ ಆಗಿದೆ ಎಂದು ಹೇಳಿ ಮೊಬೈಲ್​ ಮರುಕಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ನಂತರ ಪಾರುಲ್​ ಷಾ ಅವರು ತಮ್ಮ ಬ್ಯಾಂಕ್​ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಖಾತೆಯಿಂದ 52 ಸಾವಿರ ರೂ. ವರ್ಗಾವಣೆಗೊಂಡಿರುವುದು ತಿಳಿದಿದೆ. ಇದರಿಂದ ಗಾಬರಿಗೊಂಡ ಮಾಣಿಕ್​ ಷಾ ಅವರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 16 August 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು