AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ

ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ.

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಬೆಂಗಳೂರಿನ ಬಿರಿಯಾನಿ ಹೊಟೇಲ್​ ಮಾಲಿಕ
ಸಾಂರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 16, 2023 | 7:53 AM

Share

ಬೆಂಗಳೂರು: ಆನ್‌ಲೈನ್ ಪೇಮೆಂಟ್​ (Online Payment) ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ (Cash Back) ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ (Account) ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ಯಾರುಲ್​ ಷಾ ತಮ್ಮ ಹೊಟೇಲ್​ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಈ ವೇಳೆ ಹೋಟೆಲ್​ಗೆ ಬಂದ ಇಬ್ಬರು ಅಪರಿಚಿತರು ತಾವು ಬ್ಯಾಂಕ್ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ.

ನಂತರ ಪ್ಯಾರುಲ್​ ಷಾ ಅವರಿಗೆ ನೀವು ಈ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ಪ್ರತಿದಿನ 300 ರೂ. ಕ್ಯಾಶ್​ಬ್ಯಾಕ್​​ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಉತ್ಸುಕರಾದ ಪ್ಯಾರುಲ್​ ಷಾ ಅವರು ಅಪರಿಚಿತ ವ್ಯಕ್ತಿಗೆ ತಮ್ಮ ಮೊಬೈಲ್​ ನೀಡಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರಗಳನ್ನೂ ಸಹ ಅವರಿಗೆ ಹೇಳಿದ್ದಾರೆ ನಂತರ ಈ ಇಬ್ಬರು ಕೆಲ ಕಾಲ ಮೊಬೈಲ್‌ ಬಳಸಿ ಆ್ಯಪ್​ ಇನ್​ಸ್ಟಾಲ್​ ಆಗಿದೆ ಎಂದು ಹೇಳಿ ಮೊಬೈಲ್​ ಮರುಕಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ನಂತರ ಪಾರುಲ್​ ಷಾ ಅವರು ತಮ್ಮ ಬ್ಯಾಂಕ್​ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಖಾತೆಯಿಂದ 52 ಸಾವಿರ ರೂ. ವರ್ಗಾವಣೆಗೊಂಡಿರುವುದು ತಿಳಿದಿದೆ. ಇದರಿಂದ ಗಾಬರಿಗೊಂಡ ಮಾಣಿಕ್​ ಷಾ ಅವರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 16 August 23

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್