AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದವನ ಬಂಧನ

ಇನ್​​ಸ್ಟಾಗ್ರಾಂ ಮೂಲಕ ಆರ್ಡರ್ ಮಾಡಿ ವಿದೇಶದಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಲೇಜೊಂದರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದ್ದು, ಹಲವು ವಿಚಾರಗಳು ಬಯಲಾಗಿವೆ. ವಿವರ ಇಲ್ಲಿದೆ.

ಬೆಂಗಳೂರು: ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದವನ ಬಂಧನ
ಬಿಡಿಎಗೆ ನಕಲಿ ದಾಖಲೆ ಸಲ್ಲಿಸಿ 70 ಕೋಟಿ ರೂ. ಪರಿಹಾರಕ್ಕೆ ಪ್ಲ್ಯಾನ್: ಐವರು ಆರೋಪಿಗಳ ಬಂಧನ
Follow us
Shivaprasad
| Updated By: Ganapathi Sharma

Updated on: Sep 10, 2024 | 12:15 PM

ಬೆಂಗಳೂರು, ಸೆಪ್ಟೆಂಬರ್ 10: ಇನ್​​ಸ್ಟಾಗ್ರಾಂ ಮೂಲಕ ಆರ್ಡರ್ ಮಾಡಿ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿ ತೌನೇಶ್ ಎಂಬಾತನನ್ನು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.22 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಅಂಧ್ರಹಳ್ಳಿಯ ಕಾಲೇಜೊಂದರ ಬಳಿ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ.

ಆರೋಪಿ ಬಳಿಯಿದ್ದ 2 ಕೆಜಿ 779 ಗ್ರಾಂ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದೆ. ತೌನೇಶ್​ಗೆ ಕೇರಳ ಮೂಲದ ಸೈಜು ಎಂಬಾತನಿಂದ ಹೈಡ್ರೋ ಗಾಂಜಾ ಬರುತ್ತಿತ್ತು ಎನ್ನಲಾಗಿದೆ.

ತೌನೇಶ್​ಗೆ ಒಂದು ವರ್ಷದ ಹಿಂದೆ ಇನ್​​ಸ್ಟಾಗ್ರಾಂನಲ್ಲಿ ಸೈಜು ಪರಿಚಯವಾಗಿದ್ದ. ಈತ ವಿಮಾನ ನಿಲ್ದಾಣದಲ್ಲಿ ಯಾಮಾರಿಸಿ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ. ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು. ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿರುವುದರಿಂದ ವಾಸನೆ ಕೂಡ ಬರುತ್ತಿರಲಿಲ್ಲ. ಜೊತೆಗೆ, ಸ್ಕ್ಯಾನ್ ಮಾಡಿದಾಗಲೂ ಗಾಂಜಾ ಇದೆ ಎಂಬುದು ಗೊತ್ತಾಗುತ್ತಿರಲಿಲ್ಲ.

ಬಟ್ಟೆ ವ್ಯಾಪಾರಿಯಾಗಿರುವ ತೌನೇಶ್ 2020 ರಿಂದಲೇ ಗಾಂಜಾ ಮಾರಾಟ ಮಾಡುತ್ತಿದ್ದ. ಬೆಂಗಳೂರಿನ 4 ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಮಾಲೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಕೋಲಾರ ಜಿಲ್ಲೆಯ ಜಿಲ್ಲೆ ಮಾಲೂರು ತಾಲೂಕಿನ ಬ್ಯಾಲಹಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಮಾಲೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳ ಬಂಧನವಾಗಿದೆ.

ಇದನ್ನೂ ಓದಿ: ಪಕ್ಕದ ಮನೆಯ ಬಾಲಕನನ್ನು ಹತ್ಯೆ ಮಾಡಿ ವಾಷಿಂಗ್​ ಮಷಿನ್​ನಲ್ಲಿ ಬಚ್ಚಿಟ್ಟಿದ್ದ ಮಹಿಳೆ

ಬಿಹಾರ ಮೂಲದ ರಂಜನ್ ಕುಮಾರ್, ಬಾಮ್ ಬಾಮ್ ಕುಮಾರ್ ಭಾರತಿ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 36 ಸಾವಿರ ರೂ. ಬೆಲೆಬಾಳುವ 850 ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್