Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ವೇಳೆ ಜಪ್ತಿಯಾದ ವಾಹನಗಳು ವಾಪಸ್! *Conditions Apply

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ಇಡೀ ಬೆಂಗಳೂರು ಲಾಕ್‌ಡೌನ್ ಆಗಿದ್ದಾಗ ಅನೇಕ ಮಂದಿ ತಮ್ಮ ವಾಹನಗಳಲ್ಲಿ ನಗರ ಸಂಚಾರಕ್ಕೆ ಬಂದಿದ್ದರು. ಆವೇಳೆ ನಗರ ಪೊಲೀಸರು ನಿರ್ದಾಕ್ಷಿಣ್ಯವಾಗಿ ವಾಹನಗಳನ್ನು ವಶಪಡಿಸಿಕೊಂಡಿದ್ದರು. ಇದರಿಂದ ಕಂಗಾಲಾಗಿದ್ದ ವಅಹನ ಸವಾರರು ಮತ್ತೆ ಯಾವಾಗಪ್ಪಾ ನಮ್ಮ ವಾಹನಗಳು ನಮ್ಮ ಕೈಸೇರುವುದು ಎಂದು ತಲೆ ಮೇಲೆ ಕೈಹೊತ್ತಿ ಕುಳಿತಿದ್ದರು. ವಾಹನಗಳು ವಾಪಾಸಾಗೋದು ಮೂರು ತಿಂಗಳಿಗಂತೆ/ ಆರು ತಿಂಗಳಿಗಂತೆ, ಪೊಲೀಸರು ಎಫ್​ಐಆರ್ ಹಾಕಿದಾರಂತೆ ಕೋರ್ಟಿಗೇ ಹೋಗಿ ಬಿಡಿಸಿಕೊಂಡುಬರಬೇಕಂತೆ ಎಂದೆಲ್ಲಾ ವಾಹನ ಸವಾರರ ಆತಂಕ ಮತ್ತಷ್ಟು ಹೆಚ್ಚಿಸುವ ಮಾತುಗಳು […]

ಲಾಕ್‌ಡೌನ್ ವೇಳೆ ಜಪ್ತಿಯಾದ ವಾಹನಗಳು ವಾಪಸ್! *Conditions Apply
Follow us
ಸಾಧು ಶ್ರೀನಾಥ್​
|

Updated on:Apr 30, 2020 | 11:11 AM

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ಇಡೀ ಬೆಂಗಳೂರು ಲಾಕ್‌ಡೌನ್ ಆಗಿದ್ದಾಗ ಅನೇಕ ಮಂದಿ ತಮ್ಮ ವಾಹನಗಳಲ್ಲಿ ನಗರ ಸಂಚಾರಕ್ಕೆ ಬಂದಿದ್ದರು. ಆವೇಳೆ ನಗರ ಪೊಲೀಸರು ನಿರ್ದಾಕ್ಷಿಣ್ಯವಾಗಿ ವಾಹನಗಳನ್ನು ವಶಪಡಿಸಿಕೊಂಡಿದ್ದರು. ಇದರಿಂದ ಕಂಗಾಲಾಗಿದ್ದ ವಅಹನ ಸವಾರರು ಮತ್ತೆ ಯಾವಾಗಪ್ಪಾ ನಮ್ಮ ವಾಹನಗಳು ನಮ್ಮ ಕೈಸೇರುವುದು ಎಂದು ತಲೆ ಮೇಲೆ ಕೈಹೊತ್ತಿ ಕುಳಿತಿದ್ದರು. ವಾಹನಗಳು ವಾಪಾಸಾಗೋದು ಮೂರು ತಿಂಗಳಿಗಂತೆ/ ಆರು ತಿಂಗಳಿಗಂತೆ, ಪೊಲೀಸರು ಎಫ್​ಐಆರ್ ಹಾಕಿದಾರಂತೆ ಕೋರ್ಟಿಗೇ ಹೋಗಿ ಬಿಡಿಸಿಕೊಂಡುಬರಬೇಕಂತೆ ಎಂದೆಲ್ಲಾ ವಾಹನ ಸವಾರರ ಆತಂಕ ಮತ್ತಷ್ಟು ಹೆಚ್ಚಿಸುವ ಮಾತುಗಳು ಕೇಳಿಬಂದಿದ್ದವು.

ಆದ್ರೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್‌ ರಾವ್‌ ಇದಕ್ಕೆ ಫುಲ್​ ಸ್ಟಾಪ್​ ಇಟ್ಟಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪೊಲೀಸ್​ ಆಯುಕ್ತರು ಲಾಕ್‌ಡೌನ್ ಆರಂಭದ ದಿನಗಳಲ್ಲಿ ಸೀಜ್‌ ಆಗಿರುವ ವಾಹನಗಳನ್ನು ಮೇ 1ರಿಂದ ವಾಪಸ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Conditions Apply: ಸಿಎಂ, ಗೃಹ ಸಚಿವರ ಅನುಮತಿ ಮೇರೆಗೆ ವಾಹನಗಳ ವಾಪಸ್​ ನೀಡುತ್ತೇವೆ. ಆದ್ರೆ ಅದಕ್ಕೂ ಮುನ್ನ ವಾಹನಗಳ ದಾಖಲೆ ಪರಿಶೀಲಿಸಿ, ವಾಪಸ್ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ 47,000 ವಾಹನ ಜಪ್ತಿ ಮಾಡಲಾಗಿದೆ. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದೆವು. ಜಪ್ತಿ ಮಾಡಿರುವ ವಾಹನ ಹಿಂತಿರುಗಿಸಲು ನಿರ್ಧರಿಸಲಾಗಿದೆ. ಆಯಾ ಠಾಣೆಯಲ್ಲಿ ವಾಹನಗಳನ್ನು ವಾಪಸ್ ನೀಡಲಾಗುವುದು. ಆದ್ರೆ ಅದಕ್ಕೂ ಮೊದಲು ಎನ್‌ಡಿಎಂಎ ಕಾಯ್ದೆಯನ್ವಯ ಶುಲ್ಕ ಪಡೆಯಲಾಗುವುದು. ಮೊದಲು ಜಪ್ತಿ ಮಾಡಿದ ವಾಹನಗಳನ್ನು ಮೊದಲು ನೀಡುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

Published On - 10:31 am, Thu, 30 April 20

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು