AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು

ಕೊರ್ಟ್​ ತಡೆಯಾಜ್ಞೆ ಆದೇಶ ಇರುವ ಪ್ರಕರಣದಲ್ಲಿ ತೊಂದರೆ ಮಧ್ಯಪ್ರವೇಶಿಸಿ ತೊಂದರೆ ನೀಡುತ್ತಿರುವ ಆರೋಪದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ದೂರು ದಾಖಲಾಗಿದೆ.

Bangalore: ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು
ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು
TV9 Web
| Edited By: |

Updated on:Oct 21, 2022 | 10:12 AM

Share

ಬೆಂಗಳೂರು: ಆಸ್ತಿ ವಿಚಾರ ಪ್ರಕರಣಕ್ಕೆ ಕೊರ್ಟ್​ ತಡೆಯಾಜ್ಞೆ ಆದೇಶ ಇದ್ದಾಗಲೂ ಪ್ರಕರಣದಲ್ಲಿ ತೊಂದರೆ ನೀಡುತ್ತಿರುವುದಾಗಿ ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ಶಿವಸ್ವಾಮಿ ವಿರುದ್ಧ ವಕೀಲ ಸಮದ್ ಖಾನ್ ಎಂಬವರು ಹೈಕೋರ್ಟ್​​​ ಸಿಜೆ ಮತ್ತು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದಾರೆ. ಆಸ್ತಿ ವಿಚಾರ ಪ್ರಕರಣಕ್ಕೆ ಕೋರ್ಟ್​​ ತಡೆಯಾಜ್ಞೆ ನೀಡಿದೆ. ಅದಾಗ್ಯೂ ಮೇರಿ ಎಲೆಜಬೆತ್​ರನ್ನ ಸಂಜೆ ಮಹಿಳಾ ಸಿಬ್ಬಂದಿ ಇಲ್ಲದೆ ಅಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿರುವ ಆರೋಪ ಮಾಡಲಾಗಿದ್ದು, ಪೊಲೀಸರ ನಡೆ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ಇನ್ಸ್​ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮೇರಿ ಎಲೆಜಬೆತ್ ಎಂಬುವವರ ಆಸ್ತಿ ವಿಚಾರ ಕೋರ್ಟ್​​ನಲ್ಲಿದೆ. ಈ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆಯೂ ನೀಡಿದೆ. ಅದಾಗ್ಯೂ ಯಾವುದೇ ದೂರು ದಾಖಲಾಗಿಲ್ಲವಾದರೂ ಮೇರಿ ಎಲೆಜಬೆತ್ ಅವರನ್ನ ಯಾವುದೇ ಮಹಿಳಾ ಪೊಲೀಸ್ ಸಿಬ್ಬಂದಿ ಇಲ್ಲದೆಯೇ ಸಂಜೆ ವೇಳೆ ಬಂಧಿಸಿ ಠಾಣೆಗೆ ಕರೆತಂದಿರುವ ಆರೋಪ ಇನ್ಸ್​ಪೆಕ್ಟರ್ ಶಿವಸ್ವಾಮಿ ವಿರುದ್ಧ ಮಾಡಲಾಗಿದೆ. ಕೋರ್ಟ್​ನಿಂದ ತಡೆಯಾಜ್ಞೆ ಇರುವ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುತ್ತಿದ್ದಾರೆ. ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರಿಂಕೊರ್ಟ್ ಗೈಡ್ ಲೈನ್ಸ್ ಇದ್ದರೂ ಪೊಲೀಸರು ಮಧ್ಯಪ್ರವೇಶ ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಕೆ.ಆರ್.ಪುರಂ ಠಾಣೆ ಇನ್ಸ್​​ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪದಡಿ ನಗರದ ಕೆ.ಆರ್.ಪುರ ಠಾಣೆ ಇನ್ಸ್​​ಪೆಕ್ಟರ್ ನಂದೀಶ್ ಅವರನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ​ ಪ್ರತಾಪ್ ರೆಡ್ಡಿ ಅದೇಶ ಹೊರಡಿಸಿದ್ದಾರೆ. ಕೆ.ಆರ್​.ಪುರ ಠಾಣೆ ವ್ಯಾಪ್ತಿಯಲ್ಲಿ ಅವಧಿ ಮೀರಿ ನಡೆಯುತ್ತಿದ್ದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಪಬ್​ನಲ್ಲಿ ಅವಧಿ ಮುಗಿದ ಬಳಿಕವೂ ಮದ್ಯ ಸರಬರಾಜು ಮಾಡಲಾಗುತ್ತಿದ್ದ ಹಿನ್ನೆಲೆ ಕರ್ತವ್ಯ ಲೋಪದಡಿ ಇನ್ಸ್​ಪೆಕ್ಟರ್​​ ನಂದೀಶ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Fri, 21 October 22

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ